Thursday, December 7, 2023

ಬೆಂಗಳೂರಿನಲ್ಲಿ 3322, ರಾಜ್ಯದಲ್ಲಿ 8191 ಮಂದಿಗೆ ಕೊರೋನಾ, 101 ಜನ ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಭಾನುವಾರ 8191 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,19, 537ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಭಾನುವಾರ 3322 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 194760 ಕ್ಕೆ ಏರಿಕೆಯಾಗಿದೆ.
ಭಾನುವಾರ ರಾಜ್ಯಾದ್ಯಂತ ಒಟ್ಟು 101 ಸೋಂಕಿತರು ಕೊರೋನಾ ಸೋಂಕಿನಿಂದ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 8,023ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಭಾನುವಾರ 32 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಈವರೆಗೆ ಬೆಂಗಳೂರಿನಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 2657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಈವರೆಗೆ 4,13,452 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಕಾರಣ, ರಾಜ್ಯದಲ್ಲಿ 98,043 ಸಕ್ರಿಯ ಸೋಂಕಿತರಿದ್ದಾರೆ.
ಬಾಗಲಕೋಟೆ – 90, ಬಳ್ಳಾರಿ – 298, ಬೆಳಗಾವಿ – 151, ಬೆಂಗಳೂರು ಗ್ರಾಮಾಂತರ – 179, ಬೆಂಗಳೂರು ನಗರ – 3322, ಬೀದರ್ – 77, ಚಾಮರಾಜನಗರ – 69, ಚಿಕ್ಕಬಳ್ಳಾಪುರ – 81, ಚಿಕ್ಕಮಗಳೂರು – 129, ಚಿತ್ರದುರ್ಗ – 0, ದಕ್ಷಿಣ ಕನ್ನಡ – 380, ದಾವಣಗೆರೆ – 130, ಧಾರವಾಡ – 305, ಗದಗ – 75, ಹಾಸನ – 277, ಹಾವೇರಿ – 44, ಕಲಬುರ್ಗಿ – 136, ಕೊಡಗು – 32, ಕೋಲಾರ – 105, ಕೊಪ್ಪಳ – 337, ಮಂಡ್ಯ – 165, ಮೈಸೂರು – 481, ರಾಯಚೂರು – 132, ರಾಮನಗರ – 57, ಶಿವಮೊಗ್ಗ – 295, ತುಮಕೂರು – 244, ಉಡುಪಿ – 295, ಉತ್ತರ ಕನ್ನಡ – 108, ವಿಜಯಪುರ – 81 ಮತ್ತು ಯಾದಗಿರಿ – 116 ಕೊರೋನಾ ಪ್ರಕರಣ ಸೇರಿದಂತೆ ಒಟ್ಟು 8191 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,19,537ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF)...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
- Advertisement -
error: Content is protected !!