newsics.com
ನವದೆಹಲಿ: ವಿದೇಶಿ ದೇಣಿಗೆ ಪಡೆಯಲು ಬಯಸುವ ಎನ್ ಜಿಒಗಳಿಗೆ ಆಧಾರ್ ಕಡ್ಡಾಯಗೊಳಿಸಲು ಲೋಕಸಭೆ ‘ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆ, 2010 ತಿದ್ದುಪಡಿಗೆ’ ಸೋಮವಾರ ಲೋಕಸಭೆ ಅನುಮೋದನೆ ನೀಡಿದೆ.
ಮಂಗಳವಾರ (ಸೆ.22) ರಾಜ್ಯಸಭೆಯಲ್ಲಿ ಈ ತಿದ್ದುಪಡಿ ಕಾಯ್ದೆ ಮಂಡನೆಯಾಗಲಿದೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ವಿದೇಶಿ ದೇಣಿಯ ಬಳಕೆಯು ಪಾರದರ್ಶಕವಾಗಿರಲು ಹಾಗೂ ಲೆಕ್ಕಾಚಾರ ಹೊಂದಿರಲು ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಗೆ (ಎಫ್ಸಿಆರ್ಎ) ತರಲಾಗಿರುವ ತಿದ್ದುಪಡಿ ಸಹಕಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ಹೇಳಿತ್ತು.
ಚೀನಾದಿಂದ ಆಮದು ಪ್ರಮಾಣ ಶೇ.27 ಕುಸಿತ
ಎಫ್ಸಿಆರ್ಎ ತಿದ್ದುಪಡಿಗೆ ಮೇಲ್ಮನೆಯಿಂದ ಅನುಮೋದನೆ ಪಡೆದು ಅದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಂಕಿತ ದೊರೆತರೆ, ಸಾರ್ವಜನಿಕ ಸೇವೆಯಲ್ಲಿರುವವರು ವಿದೇಶಿ ದೇಣಿಗೆ ಪಡೆಯುವುದಕ್ಕೆ ನಿರ್ಬಂಧ ಬೀಳಲಿದೆ. ವಿದೇಶಿ ಮೂಲಗಳಿಂದ ದೇಣಿಗೆ ಪಡೆಯಲಿರುವ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಆಧಾರ್ ಸಂಖ್ಯೆ ನೀಡುವುದು ಕಡ್ಡಾಯವಾಗಲಿದೆ. ತಿದ್ದುಪಡಿಯಿಂದಾಗಿ ಸ್ವೀಕರಿಸಲಾಗುವ ವಿದೇಶಿ ದೇಣಿಗೆಯಲ್ಲಿ ಆಡಳಿತಾತ್ಮಕ ಉದ್ದೇಶಗಳಿಗೆ ಶೇ.50ರಷ್ಟು ಬದಲು ಶೇ. 20ರಷ್ಟು ಮೊತ್ತವನ್ನಷ್ಟೇ ಬಳಸಲು ಅವಕಾಶವಿರುತ್ತದೆ.
2011 ಮೇ 1 ರಂದು ಕಾಯ್ದೆ ಜಾರಿಗೆ ಬಂದಿದ್ದು, ಎರಡು ಬಾರಿ ತಿದ್ದುಪಡಿಯಾಗಿದೆ. ಅಂಕಿ-ಅಂಶಗಳ ಪ್ರಕಾರ, 2016-17 ಮತ್ತು 2018-19ರ ಅವಧಿಯಲ್ಲಿ ವಿವಿಧ ನೋಂದಾಯಿತ ಸೇವಾ ಸಂಸ್ಥೆಗಳು ಒಟ್ಟು ₹58,000 ಕೋಟಿ ವಿದೇಶಿ ದೇಣಿಗೆಯನ್ನು ಸ್ವೀಕರಿಸಿವೆ.
12 ಕೋಟಿ ಲಾಟರಿ ಗೆದ್ದ ದೇಗುಲದ ಕ್ಲರ್ಕ್!
9 ಬ್ಯಾಂಕ್’ಗಳಿಗೆ 1,400 ಕೋಟಿ ವಂಚನೆ; ಕ್ವಾಲಿಟಿ ವಿರುದ್ಧ ಸಿಬಿಐ ಕೇಸ್