ರಾಂಚಿ: ಕೇರಳ ದುರಂತ ಬೆನ್ನಲ್ಲೇ ಜಾರ್ಖಂಡ್ನ ರಾಂಚಿಯಿಂದ ಮುಂಬೈಗೆ ಹಾರಾಟ ಕೈಗೊಂಡಿದ್ದ ಏರ್ ಏಷ್ಯಾ ವಿಮಾನ (i5-632) ಟೇಕಾಫ್ ಕೆಲವೇ ಹೊತ್ತಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟೇಕಾಫ್ ಆಗುವ ವೇಳೆ ವಿಮಾನಕ್ಕೆ ಹಕ್ಕಿಯೊಂದು ಬಡಿದಿದೆ. ಹೀಗಾಗಿ ವಿಮಾನ ಕೂಡಲೇ ಭೂಸ್ಪರ್ಶ ಮಾಡಬೇಕಾಯಿತು. ಸಮಸ್ಯೆ ಸರಿಪಡಿಸಿದ ನಂತರ, ಪ್ರಕ್ರಿಯೆಗಳೆಲ್ಲವನ್ನೂ ಪೂರ್ಣಗೊಳಿಸಿ ವಿಮಾನ ಮುಂಬೈಗೆ ಹಾರಾಟ ಕೈಗೊಂಡಿತು ಎಂದು ಏರ್ ಏಷ್ಯಾ ವಕ್ತಾರರು ತಿಳಿಸಿದ್ದಾರೆ.
ವಿಮಾನದಲ್ಲಿದ್ದ ಪ್ರಯಾಣಿಕರೂ ಸೇರಿದಂತೆ ಪ್ರತಿಯೊಬ್ಬರೂ ಕ್ಷೇಮವಾಗಿರುವುದಾಗಿ ವಿಮಾನ ನಿಲ್ದಾಣ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವಿಮಾನಕ್ಕೆ ಹಕ್ಕಿ ಬಡಿದ ವಿಚಾರವನ್ನು ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಶರ್ಮಾ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಸ್ವತಃ ತಾವೇ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ರಾಂಚಿಯಲ್ಲಿ ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ
Follow Us