Monday, October 2, 2023

ಹೂವಿನ ಬೀಜಸಹಿತ ಧ್ವಜ ವಿತರಿಸಿದ ಏರ್ ಇಂಡಿಯಾ

Follow Us

ಶ್ರೀನಗರ: 71ನೇ ಗಣರಾಜ್ಯೋತ್ಸವದ ನೆನಪಿಗಾಗಿ ರಾಷ್ಟ್ರೀಯ ವಿಮಾನ ಯಾನ ಸಂಸ್ಥೆ ಏರ್ ಇಂಡಿಯಾ ಇದೇ ಮೊದಲ ಬಾರಿಗೆ ತನ್ನ ಪ್ರಯಾಣಿಕರಿಗೆ ಸುಮಾರು 30 ಸಾವಿರ ಬೀಜಸಹಿತ ಪರಿಸರಸ್ನೇಹಿ ರಾಷ್ಟ್ರಧ್ವಜಗಳನ್ನು ವಿತರಿಸಿದೆ.
ದೇಶದ ಪ್ರಮುಖ ವಿಮಾನ ನಿಲ್ದಾಣಗಳಾದ ಶ್ರೀನಗರ, ದೆಹಲಿ, ಮುಂಬಯಿ, ಕೊಲ್ಕತ್ತ, ಚೆನ್ನೈ, ಬೆಂಗಳೂರು ಹಾಗೂ ಹೈದರಾಬಾದ್‌ಗಳಲ್ಲಿ ಬೆಳಗ್ಗೆ ಆಗಮಿಸುವ ಪ್ರಯಾಣಿಕರಿಗೆ ಇವುಗಳನ್ನು ವಿತರಿಸಲಾಯಿತು ಎಂದು ಸಂಸ್ಥೆಯ ವಕ್ತಾರ ಧನಂಜಯ್ ಕುಮಾರ್ ತಿಳಿಸಿದರು.
ರಾಷ್ಟ್ರಧ್ವಜಗಳನ್ನು ಕೈಯಿಂದ ತಯಾರಿಸಲಾಗಿದೆ. ಈ ಧ್ವಜಗಳನ್ನು ಮಧ್ಯಪ್ರದೇಶದ ಸಹರಿಯ ಬುಡಕಟ್ಟು ಜನಾಂಗದ ಕಲಾವಿದರು ತಯಾರಿಸಿದ್ದಾರೆ. ಕಾಗದ, ಹತ್ತಿ ಚೂರು, ಬಟ್ಟೆ ತುಂಡುಗಳಿಂದ ತಯಾರಿಸಲಾಗಿದೆ. ಇವುಗಳಲ್ಲಿ ಚೆಂಡು ಮಲ್ಲಿಗೆ ಹಾಗೂ ಮೆಂತ್ಯ ಬೀಜಗಳನ್ನು ತುಂಬಿಸಲಾಗಿದೆ. ಇವುಗಳು ನೆಲಕ್ಕೆ ಬಿದ್ದರೆ, ಈ ಬೀಜಗಳು ಗಿಡಗಳಾಗಿ ಹಸಿರು ಪಸರಿಸಲಿದೆ ಎಂದರು.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!