Monday, October 2, 2023

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಒಂದೂವರೆ ಕೋಟಿ ಭಾರತೀಯರಿಂದ ರಾಷ್ಟ್ರಗೀತೆ

Follow Us

newsics.com

ನವದೆಹಲಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಈವರೆಗೆ ಒಂದೂವರೆ ಕೋಟಿ‌ ಭಾರತೀಯರು ರಾಷ್ಟ್ರಗೀತೆ ಹಾಡಿದ್ದಾರೆ.
ಭಾರತೀಯರು ರಾಷ್ಟ್ರಗೀತೆಯನ್ನು ಒಟ್ಟಾಗಿ ಹಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಕರೆಗೆ ಭಾರೀ ಸ್ಪಂದನೆ ವ್ಯಕ್ತವಾಗಿದೆ.

1.5 ಕೋಟಿ ಮಂದಿ ರಾಷ್ಟ್ರಗೀತೆ ಹಾಡಿ ವಿಡಿಯೋಗಳನ್ನು ಸರ್ಕಾರದ ವೆಬ್‌ಸೈಟ್‌ rashtragaan.inಗೆ ಅಪ್ಲೋಡ್‌ ಮಾಡಿದ್ದಾರೆ ಎಂದು ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೊ (ಪಿಐಬಿ) ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 25 ರಂದು ‘ಮನ್ ಕಿ ಬಾತ್’ನಲ್ಲಿ ದೇಶದ ನಾಗರಿಕರು ರಾಷ್ಟ್ರಗೀತೆಯನ್ನು ಒಟ್ಟಿಗೆ ಹಾಡಲು ಕರೆ ನೀಡಿದ್ದರು.

ನಾಗರಿಕರು ರಾಷ್ಟ್ರಗೀತೆ ‘ಜನ ಗಣ ಮನ’ ಹಾಡಿ, ಅದನ್ನು ವಿಡಿಯೊ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಆಗಸ್ಟ್ 15 ರವರೆಗೆ ಸಂಸ್ಕೃತಿ ಇಲಾಖೆ ತಿಳಿಸಿತ್ತು.

ಪ್ರಸಿದ್ಧ ವಿದ್ವಾಂಸರು, ಕಲಾವಿದರು, ಹಿರಿಯ ಅಧಿಕಾರಿಗಳು, ಕೆಚ್ಚೆದೆಯ ಸೈನಿಕರು, ರೈತರು, ಕಾರ್ಮಿಕರು ಸೇರಿ ದೇಶದ ಎಲ್ಲ ಭಾಗಗಳ ಜನರೂ ರಾಷ್ಟ್ರಗೀತೆಯನ್ನು ಹಾಡಿದ್ದಾರೆ. ವಿದೇಶಗಳಲ್ಲಿ ನೆಲೆಸಿರುವ ಭಾರತೀಯರೂ ರಾಷ್ಟ್ರಗೀತೆಗೆ ದನಿಗೂಡಿಸಿದ್ದಾರೆ.

ಭಾರತೀಯ ಅಥ್ಲೀಟ್ಸ್’ಗಳ ಸಾಧನೆ ಯುವ ಪೀಳಿಗೆಗೆ ಸ್ಪೂರ್ತಿ-ರಾಷ್ಟ್ರಪತಿ ರಾಮನಾಥ್ ಕೋವಿಂದ್

ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್, ವೀಕೆಂಡ್ ಕರ್ಫ್ಯೂ ಇಲ್ಲ

ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ: ಸಿಎಂ ಬೊಮ್ಮಾಯಿ

ದೇಗುಲ ಪ್ರವೇಶ ನಿಷೇಧ: ರಸ್ತೆಯಲ್ಲೇ ದೇವರಿಗೆ ಪೂಜೆ!

ಬೀದಿಗೆ ಬಂತು ಮಾತೆಯರಿಬ್ಬರ ಪ್ರವಚನ ಕಚ್ಚಾಟ!

ತಪಾಸಣೆ ವೇಳೆ ಪೊಲೀಸ್ ಸಿಬ್ಬಂದಿಯನ್ನೇ ಎಳೆದೊಯ್ದ ಕಾರು!

ಹೈಟಿಯಲ್ಲಿ ಪ್ರಬಲ ಭೂಕಂಪ: 29 ಮಂದಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
- Advertisement -
error: Content is protected !!