Sunday, March 26, 2023

ಜಾಮೀನು ಅರ್ಜಿ ವಜಾ; ರಾಗಿಣಿ, ಸಂಜನಾ ಸೇರಿ ಎಲ್ಲರಿಗೂ ಜೈಲೇ ಗತಿ

Follow Us

newsics.com
ಬೆಂಗಳೂರು: ಚಂದನವನದ ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ಎನ್’ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಇಬ್ಬರೂ ನಟಿಯರು ಸೇರಿ ಎಲ್ಲರೂ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಾಗಿ ಮುಂದುವರಿಯುವುದು ಅನಿವಾರ್ಯವಾಗಿದೆ. ಸೆಪ್ಟೆಂಬರ್ 14ರಿಂದ ಜೈಲಿನಲ್ಲಿರುವಂತ ನಟಿ ರಾಗಿಣಿ ಹಾಗೂ ಸೆ.16ರಿಂದ ಜೈಲಿನಲ್ಲಿರುವ ನಟಿ ಸಂಜನಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಎನ್ ಡಿಪಿಎಸ್ ಕೋರ್ಟ್, ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವುದರಿಂದ ಇನ್ನೂ ಕೆಲ ಕಾಲ ಜೈಲಿನಲ್ಲಿರಬೇಕಾಗಿದೆ.
ರಾಗಿಣಿ ಬಾಯ್ ಫ್ರೆಂಡ್ ಶಿವಪ್ರಕಾಶ್ ಚಪ್ಪಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಶಿವಪ್ರಕಾಶ್ ಚಪ್ಪಿ ತಲೆಮರೆಸಿಕೊಂಡಿದ್ದು, ಚಪ್ಪಿಗಾಗಿ ಪೊಲೀಸರು ಇನ್ನೂ ಶೋಧ ಮುಂದುವರಿಸಿದ್ದಾರೆ. ಇತರ ಆರೋಪಿಗಳಾದ ರಾಹುಲ್, ವಿನಯ್ ಕುಮಾರ್ ಅವರ ಜಾಮೀನು ಅರ್ಜಿಯೂ ವಜಾಗೊಂಡಿದೆ. ಪ್ರಕರಣದ ಎ1 ಆರೋಪಿ ಶಿವಪ್ರಕಾಶ್, ಸಂಜನಾ ಆಪ್ತ ರಾಹುಲ್ ಹಾಗೂ ಎ12 ಆರೋಪಿ ವಿನಯ್ ನಿರೀಕ್ಷಾಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಎನ್ ಡಿ ಪಿಎಸ್ ಕೋರ್ಟ್ ನ ನ್ಯಾಯಾಧೀಶರಾದಂತ ಸೀನಪ್ಪ ಅವರು, ಜಾಮೀನು ಅರ್ಜಿಯನ್ನು ವಜಾ ಗೊಳಿಸಿದೆ. ಹೀಗಾಗಿ ಮೂವರಿಗೂ ಜೈಲೇ ಗತಿಯಾದಂತೆ ಆಗಿದೆ.
ಎನ್’ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಜಿ.ಎಂ.ಶೀನಪ್ಪ ಈ ಆದೇಶ ನೀಡಿದ್ದು, ಈ ಆದೇಶ ಪ್ರಶ್ನಿಸಿ ರಾಗಿಣಿ, ಸಂಜನಾ ಸೇರಿ ಎಲ್ಲ ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ. ಏನೇ ಆದರೂ ಇನ್ನೂ ಒಂದು ವಾರ ಎಲ್ಲರೂ ಜೈಲು ವಾಸ ಅನುಭವಿಸುವುದು ಅನಿವಾರ್ಯವಾಗಿದೆ. ರಾಗಿಣಿ, ಸಂಜನಾ ಮತ್ತಿತರ ಆರೋಪಿಗಳು ನಾಳೆ ಅಥವಾ ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.
ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಹಾಗೂ ಕೊರೋನಾ ಕ್ವಾರಂಟೈನ್ ಅವಧಿ ಮುಗಿದಿರುವುದರಿಂದ ರಾಗಿಣಿ ದ್ವಿವೇದಿ, ಸಂಜನಾ ಸೇರಿ ಎಲ್ಲರೂ ಸಾಮಾನ್ಯ ಸೆಲ್ ಗೆ ಸ್ಥಳಾಂತರಗೊಳ್ಳಲಿದ್ದಾರೆ ಎಂದು ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುವೆ

ಐಸಿಸ್ ಉಗ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಎನ್ ಐ ಎ ಕೋರ್ಟ್

ಮತ್ತಷ್ಟು ಸುದ್ದಿಗಳು

vertical

Latest News

ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ

newsics.com ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ...

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

newsics.com ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

newsics.com ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ. ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್...
- Advertisement -
error: Content is protected !!