newsics.com
ಬೆಂಗಳೂರು: ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನೀಡುವುದನ್ನು ನಿಷೇಧಿಸಿ ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನಾವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದರು.
ಸಿಎಂ ಬೊಮ್ಮಾಯಿ ಅವರ ಈ ಮೌಖಿಕ ಆದೇಶವನ್ನೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರದ ಅಧಿಕೃತ ಆದೇಶವನ್ನಾಗಿ ಜಾರಿಗೊಳಿಸಿದ್ದಾರೆ.
ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
11 ನಿಮಿಷವಷ್ಟೇ ಅತ್ಯಾಚಾರ ನಡೆದಿದೆ ಎಂದು ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಜಡ್ಜ್ ವಿರುದ್ಧ ಜನಾಕ್ರೋಶ
ಅಭ್ಯರ್ಥಿಗಳ ಆಯ್ಕೆ ಮಾಡಿದ 48 ಗಂಟೆಗಳ ಒಳಗೆ ಅಪರಾಧಗಳ ಮಾಹಿತಿ ಬಹಿರಂಗ ಕಡ್ಡಾಯ: ಸುಪ್ರೀಂ ಆದೇಶ
ನೀರಜ್ ಚೋಪ್ರಾಗೆ ಕಾಶೀನಾಥ್ ಕೋಚ್ ಆಗಿರಲಿಲ್ಲ: ಸ್ಪಷ್ಟೀಕರಣ ನೀಡಿದ ಅಥ್ಲೆಟಿಕ್ಸ್ ಸಂಸ್ಥೆ