Saturday, April 1, 2023

ಕಂಬಳದ ಉಸೇನ್ ಬೋಲ್ಟ್ ಗೆ ದೆಹಲಿಯ ಎಸ್ಎಐ ಬುಲಾವ್

Follow Us

ನವದೆಹಲಿ: ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ ಮಿಜಾರು ಅಶ್ವತ್ಥಪುರ ಶ್ರೀನಿವಾಸಗೌಡ ಅವರಿಗೆ ದೆಹಲಿಯ ಎಸ್ಎಐ ನಿಂದ ಕರೆಬಂದಿದೆ.
ಈ ವಿಷಯವನ್ನು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ತಮ್ಮ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ತಮ್ಮ ಇಲಾಖೆ ಅಧಿಕಾರಿಗಳು ಈಗಾಗಲೇ ಶ್ರೀನಿವಾಸ್ ಅವರನ್ನು ಸಂಪರ್ಕಿಸಿದ್ದು ಸೋಮವಾರ (ಫೆ.17) ಎಸ್ಎಐ ತರಬೇತುದಾರರ ಎದುರು ಹಾಜರಾಗಲು ಅಗತ್ಯವಾದ ಎಲ್ಲ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕಂಬಳದ ಕೆಸರುಗದ್ದೆಯಲ್ಲಿ ಉಸೇನ್​ ಬೋಲ್ಟ್​ಗಿಂತ ವೇಗವಾಗಿ ಓಡಿದ ಶ್ರೀನಿವಾಸ್​ ಗೌಡ ಬಗ್ಗೆ ಕೇಂದ್ರ ಕ್ರೀಡಾ ಸಚಿವಾಲಯದ ರಾಜ್ಯ ಸಚಿವ ಕಿರೆನ್​ ರಿಜಿಜು ಶನಿವಾರ ಮೆಚ್ಚುಗೆಯ ಮಾತುಗಳನ್ನಾಡಿದ್ದರು.
ಶ್ರೀನಿವಾಸರನ್ನು ತಾವು ದೆಹಲಿಗೆ ಕರೆಸಿಕೊಳ್ಳುವುದಾಗಿ ಕಿರೆನ್​ ರಿಜಿಜು ಟ್ವಿಟ್ಟರ್ನಲ್ಲಿ ತಿಳಿಸಿದ್ದರು. ದೆಹಲಿಯಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತುದಾರರ ಎದುರಿಗೆ ಶ್ರೀನಿವಾಸ್​ ಅವರ ಓಟದ ವೇಗವನ್ನು ಪರೀಕ್ಷಿಸಲಾಗುವುದು ಎಂದು ರಿಜಿಜು ತಿಳಿಸಿದ್ದರು. ಭಾರತದ ಯಾವುದೇ ಪ್ರತಿಭೆಯೂ ಅವಕಾಶದಿಂದ ವಂಚಿತರಾಗಲು ನಾವು ಬಿಡುವುದಿಲ್ಲ ಎಂದು ಸಚಿವ ರಿಜಿಜು ಹೇಳಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!