Thursday, December 7, 2023

ಸದ್ಯದಲ್ಲೇ ಆಸ್ಪತ್ರೆಯಿಂದ ಮನೆಗೆ ಮರಳಲಿರುವ ಗಾಯಕ ಎಸ್‍ಪಿಬಿ

Follow Us

newsics.com
ಚೆನೈ:
ಕೋಟ್ಯಾಂತರ ಅಭಿಮಾನಿಗಳ ಹಾರೈಕೆ ಕೊನೆಗೂ ಫಲಿಸಿದ್ದು, ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಹೀಗಾಗಿ ಸದ್ಯದಲ್ಲೇ ಎಸ್‍ಪಿಬಿ ಆಸ್ಪತ್ರೆಯಿಂದ ಮನೆಗೆ ಮರಳಲಿದ್ದಾರೆ ಎಂದು ಗಾಯಕ ಎಸ್‍ಪಿಬಿ ಪುತ್ರ ಚರಣ್ ಮಾಹಿತಿ ನೀಡಿದ್ದಾರೆ.

ಅನಾರೋಗ್ಯಕ್ಕಿಡಾಗಿದ್ದ ಎಸ್‍ಪಿಬಿಯವರಿಗೆ ಕೊರೋನಾ ಸೋಂಕು ಕೂಡ ತಗುಲಿದ ಹಿನ್ನೆಲೆಯಲ್ಲಿ ಅವರನ್ನು ಚೆನೈನ ಎಂಜಿಎಂಗೆ ದಾಖಲಿಸಲಾಗಿತ್ತು. ಆದರೆ ಇತರ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಎಸ್‍ಪಿಬಿ ಆರೋಗ್ಯ ತೀವ್ರ ಹದಗೆಟ್ಟು ಅವರನ್ನು ವೆಂಟಿಲೇಟರ್ ಉಸಿರಾಟ ವ್ಯವಸ್ಥೆಗೆ ಒಳಪಡಿಸಲಾಗಿತ್ತು.

ಚಿಕಿತ್ಸೆ ಬಳಿಕ ಅವರ ಕೊರೋನಾ ರಿಪೋರ್ಟ ನೆಗೆಟಿವ್ ಬಂದಿದೆ. ಈ ಬಗ್ಗೆ ಪುತ್ರ ಚರಣ್ ಟ್ವೀಟ್ ಮಾಡಿದ್ದು, ತಂದೆಯ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ತಂದೆಯವರಿಗೆ ವೆಂಟಿಲೇಟರ್ ಅಳವಡಿಸಿಯೇ ಚಿಕಿತ್ಸೆ ಮುಂದುವರಿಸಲಾಗಿದೆ. ಪಿಸಿಯೋಥೆರಪಿ ಕೂಡ ಮಾಡಲಾಗುತ್ತಿದೆ. ಅವರು ದ್ರವಾಹಾರ ಸೇವಿಸುತ್ತಿದ್ದಾರೆ. ಸಧ್ಯದಲ್ಲೇ ಅವರು ಮನೆಗೆ ಮರಳಲಿದ್ದು, ಅದನ್ನು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

ಊಟ ಬಂದಾಗ ಡಾನ್ಸ್ ಮಾಡುವ ನಾಯಿ…!

ಊಟ ಬಂದಾಗ ಡಾನ್ಸ್ ಮಾಡುವ ನಾಯಿ…!

ಭಾರೀ ಮಳೆ; ಬಾಂಬೆ ಕೋರ್ಟ್ ಬಂದ್

ರಾಜ್ಯಸಭೆಯಲ್ಲೂ ವಿದೇಶಿ ದೇಣಿಗೆ ಮಸೂದೆ ಅಂಗೀಕಾರ

ಚೀನಾಗೆ ಯುದ್ಧ ಬೇಕಿಲ್ಲ- ಕ್ಸಿ ಜಿನ್ ಪಿಂಗ್

ಮತ್ತಷ್ಟು ಸುದ್ದಿಗಳು

vertical

Latest News

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF)...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
- Advertisement -
error: Content is protected !!