Monday, October 2, 2023

ದೇಶಕ್ಕೆ ಕೊರೋನಾ ಸಾವು ಸದಾ ಕಾಡುವ ನೋವು: ಪ್ರಧಾನಿ ಮೋದಿ

Follow Us

newsics.com

ನವದೆಹಲಿ: ಕೊರೋನಾ ನೋವು ನಮ್ಮನ್ನು ಸದಾ ಕಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಆದರೆ, ಭಾರತ ಲಸಿಕೆಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿಲ್ಲ. ವಿಶ್ವದ ದೊಡ್ಡ ಲಸಿಕಾ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. ಇದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಅಮೃತ ಸ್ವಾತಂತ್ರ್ಯೋತ್ಸವ ದಿನವಾದ ಭಾನುವಾರ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, ಈವರೆಗೆ 54 ಕೋಟಿ ಜನ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕಡಿಮೆ ಜನರಿಗೆ ಸೋಂಕು ತಗುಲಿದೆ. ನಮ್ಮಿಂದ ಬಹಳಷ್ಟು ಜನರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಕೊರೊನಾದಿಂದ ಎಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಕೊರೋನಾ ನೋವು ನಮ್ಮನ್ನು ಯಾವಾಗಲೂ ಕಾಡುತ್ತಿದೆ ಎಂದರು.

ಭಾರತ ವಿಕಾಸ ಯಾತ್ರೆಯಲ್ಲಿ ಹೊಸ ಸಂಕಲ್ಪಗಳೊಂದಿಗೆ ನಾವು ಮುನ್ನಡೆಯಬೇಕಾಗಿದೆ. ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಶ್ರದ್ಧೆಯೊಂದಿಗೆ ನಾವೆಲ್ಲ ಜೊತೆಯಾಗಿದ್ದೇವೆ. ಇದರೊಂದಿಗೆ ‘ಸಬ್ ಕಾ ಪ್ರಯಾಸ್’ ಘೋಷಣೆಯೂ ನಮ್ಮದಾಗಬೇಕಿದೆ ಎಂದು ಮೋದಿ ಅಭಿಪ್ರಾಯಪಟ್ಟರು.

ದೇಶದ ಪ್ರಜಾತಂತ್ರ ಈಗ ಪಕ್ವವಾಗಿದೆ ಎಂದ ಪ್ರಧಾನಿ ಮೋದಿ, ವಿಶ್ವ ಭೂಪಟದಲ್ಲಿ ಭಾರತಕ್ಕೆ ವಿಶಿಷ್ಟ ಸ್ಥಾನ ದೊರೆತಿದೆ. ಜಾಗತಿಕ ನಾಯಕತ್ವ ವಹಿಸಿಕೊಳ್ಳುವ ಸಮಯ ಇದೀಗ ಭಾರತದ್ದಾಗಿದ್ದು, ನಾವು ಅದಕ್ಕೆ ಸಿದ್ಧವಾಗಿದ್ದೇವೆ ಎಂದರು.

ಟೋಕಿಯೋ ಒಲಂಪಿಕ್ಸ್‌ನಲ್ಲಿ ಸಾಧನೆ ಮಾಡಿದ ಭಾರತೀಯ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ನಮ್ಮ ಕ್ರೀಡಾಪಟುಗಳು ಯುವ ಭಾರತಕ್ಕೆ ಸ್ಫೂರ್ತಿ ಎಂದು ಶ್ಲಾಘಿಸಿದರು.

ಸ್ವಾತಂತ್ರ್ಯೋತ್ಸವದ ಶುಭಾಶಯಗಳು

ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯೋಣ: ಸಿಎಂ ಬೊಮ್ಮಾಯಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಒಂದೂವರೆ ಕೋಟಿ ಭಾರತೀಯರಿಂದ ರಾಷ್ಟ್ರಗೀತೆ

ಹಿರಿಯ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ‌ ಪೂಂಜ ಇನ್ನಿಲ್ಲ

ಭಾರತದ ರಾಹುಲ್ ಮೇಲೆ ಪ್ರೇಕ್ಷಕರಿಂದ ಶಾಂಪೇನ್ ಬಾಟಲಿ ಮುಚ್ಚಳ ಎಸೆತ

ಕರಾಚಿಯಲ್ಲಿ ಗ್ರೆನೇಡ್ ದಾಳಿ: ನಾಲ್ವರು ಮಕ್ಕಳು ಸೇರಿ 10 ಮಂದಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

newsics.com ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ...

ಚಿನ್ನ, ಬೆಳ್ಳಿ ದರ ಸ್ಥಿರ

Newsics.com ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
- Advertisement -
error: Content is protected !!