Saturday, April 1, 2023

ಮುಟ್ಟಿನ ವೇಳೆ ಅಡುಗೆ ಮಾಡಿ ಪತಿಗೆ ಬಡಿಸುವ ಪತ್ನಿಗೆ ನಾಯಿ ಜನ್ಮ!

Follow Us

ಅಹಮದಾಬಾದ್: ಮುಟ್ಟಾದ ಮಹಿಳೆ ಅಡುಗೆ ಮಾಡಿ ಪತಿಗೆ ಬಡಿಸಿದರೆ ಆಕೆ ಮುಂದಿನ ಜನ್ಮದಲ್ಲಿ ನಾಯಿಯಾಗುತ್ತಾಳೆ.
ಗುಜರಾತ್ ಭುಜ್‌ನ ಸ್ವಾಮಿನಾರಾಯಣ ದೇವಸ್ಥಾನದ ಸ್ವಾಮಿ ಕೃಷ್ಣಸ್ವರೂಪ್ ದಾಸ್ ಜಿ ಇಂತಹದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಟ್ಟಿನ ಅವಧಿಯಲ್ಲಿ ಪತ್ನಿ ಮಾಡಿದ ಊಟ ತಿನ್ನುವ ವ್ಯಕ್ತಿ ಕೂಡ ಮುಂದಿನ ಜನ್ಮದಲ್ಲಿ ಎತ್ತಾಗಿ ಜನಿಸುತ್ತಾನೆ ಎಂದು ಕಾರ್ಯಕ್ರಮವೊಂದರ ಭಾಷಣ ವೇಳೆ ಹೇಳಿದ್ದಾರೆ. ಮುಟ್ಟಾದ ಮಹಿಳೆಯಿಂದ ಆಹಾರ ಸ್ವೀಕರಿಸಿದರೆ ನೀವೂ ದೋಷಿಗಳಾಗ್ತೀರಿ ಎಂದು ಪುರುಷರಿಗೆ ಸ್ವಾಮಿ ಹೇಳಿದ್ದಾರೆ. 10 ವರ್ಷಗಳಲ್ಲಿ ಇದೇ ಮೊದಲ ಬಾರಿ ನಾನು ಇಂಥ ಹೇಳಿಕೆ ನೀಡುತ್ತಿದ್ದೇನೆ ಎಂದೂ ಕೃಷ್ಣಸ್ವರೂಪ್ ದಾಸ್ ಜಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!