Thursday, December 7, 2023

ರೈತ ಮಸೂದೆ ವಿರೋಧಿಸಿ ರೈತ ಆತ್ಮಹತ್ಯೆಗೆ ಶರಣು

Follow Us

ಪಂಜಾಬ: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಸೂದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತನೊರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪಂಜಾಬ್ ನ ಮಾನ್ಸಾ ಜಿಲ್ಲೆಯ ಅಕ್ಕಾನವಾಲಿ ಗ್ರಾಮದ ನಿವಾಸಿ ಪ್ರೀತಮ್ ಬಾದಲ್‍ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಪಂಜಾಬ್‍ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಸ್ವಗ್ರಾಮ ಬಾದಲ್‍ನಲ್ಲಿ ಭಾರತೀಯ ಕಿಸಾನ್ ಯೂನಿಯನ್ ಕಳೆದ ನಾಲ್ಕು ದಿನಗಳಿಂದ ರೈತ ಮಸೂದೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರೀತಂ ಆತ್ಮಹತ್ಯೆಗೆ ಕಿಸಾನ್ ಯೂನಿಯನ್ ಖಂಡನೆ ವ್ಯಕ್ತಪಡಿಸಿದ್ದು, ಸರ್ಕಾರವೇ ಅವರ ಸಾವಿಗೆ ಹೊಣೆ. ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF)...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
- Advertisement -
error: Content is protected !!