Monday, December 11, 2023

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ

Follow Us

newsics.com

ಚಂಡೀಗಡ: ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ.
ಕಳೆದ ವರ್ಷ ರೋಹಿತ್ ಶರ್ಮಾ ಜತೆ ಲೈವ್ ಚ್ಯಾಟಿಂಗ್ ಮಾಡುವ ವೇಳೆ ಪರಿಶಿಷ್ಟ ಜಾತಿಯ ಯುಜವೇಂದ್ರ ಚಹಲ್ ಅವರನ್ನು ಜಾತಿ ಕಾರಣಕ್ಕೆ ಹೀಗಳೆದಿದ್ದರು.
ಹೈಕೋರ್ಟ್ ಆದೇಶದ ಮೇರೆಗೆ ಚಂಡೀಗಡದಿಂದ ಹಿಸ್ಸಾರ್‌ಗೆ ಬಂದ ಯುವರಾಜ್ ಸಿಂಗ್ ಅವರನ್ನು ಅಲ್ಲಿನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದರು. ಹೈಕೋರ್ಟ್ನಲ್ಲಿ ಯುವರಾಜ್ ಸಿಂಗ್ ನಿರೀಕ್ಷಣಾ ಜಾಮೀನು ಪಡೆದಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಗಿದೆ.

ಬಿಡುಗಡೆಗೆ ಮುನ್ನ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಕೆಲ ಗಂಟೆಗಳ ಕಾಲ ವಿಚಾರಣೆ ನಡೆಸಿರುವುದು ತಿಳಿದುಬಂದಿದೆ.
ಕಳೆದ ವರ್ಷ ರೋಹಿತ್ ಶರ್ಮಾ ಜತೆ ಸಂವಾದ ನಡೆಸುವ ವೇಳೆ ಯುಜವೇಂದ್ರ ಚಹಲ್ ಬಗ್ಗೆ ಮಾತನಾಡುತ್ತಾ ಅವರ ಜಾತಿ ನಿಂದನೆ ಮಾಡಿ ಯುವರಾಜ್ ಹೀಗಳೆದಿದ್ದರು. ಪರಿಶಿಷ್ಟ ಜಾತಿ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಪದಪ್ರಯೋಗ ಮಾಡಿದ್ದರು.

ದಲಿತ ಹಕ್ಕು ಹೋರಾಟಗಾರ ರಜತ್ ಕಲ್ಸನ್ ಎಂಬುವರು ಯುವರಾಜ್ ಸಿಂಗ್ ವಿರುದ್ಧ ಹಾನ್ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ನಾನು ಯಾವ ಸಮುದಾಯವನ್ನೂ ತುಚ್ಛವಾಗಿ ನೋಡುವುದಿಲ್ಲ. ನನ್ನಿಂದ ತಿಳಿಯದೇ ಆಡಿದ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಯುವರಾಜ್ ಸಿಂಗ್ ಹೇಳಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ವಾಹನ ಸವಾರರಿಗೆ ಸಂತಸದ ಸುದ್ದಿ; ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ

newsics.com ನವದೆಹಲಿ: ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. OMC ಈಗಾಗಲೇ ಸರ್ಕಾರದ ಜೊತೆ...

ಮದ್ಯ ವ್ಯಸನಿಗಳಿಗೆ ಗುಡ್ ನ್ಯೂಸ್.. ಕೋಕಾ ಕೋಲಾ ಕಂಪನಿಯ ಮದ್ಯ ಮಾರಾಟ

newsics.com ನವದೆಹಲಿ: ಮದ್ಯ ಪ್ರಿಯರಿಗೆ ಸಿಹಿಸುದ್ದಿ. ತಂಪು ಪಾನೀಯ ತಯಾರಿಕಾ ಕಂಪನಿಯೊಂದು ಭಾರತದಲ್ಲಿ ಮದ್ಯದ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕೋಕಾ ಕೋಲಾ, ತಂಪು ಪಾನೀಯಗಳ ಪ್ರಪಂಚದ ದೈತ್ಯ, ಭಾರತದಲ್ಲಿ ಮೊದಲ ಬಾರಿಗೆ ಮದ್ಯದ ವಿಭಾಗಕ್ಕೆ ಪ್ರವೇಶಿಸಿತು. ಕೋಕಾ ಕೋಲಾ...

ಶ್ರೀರಾಮನ ಆರಾಧನೆಗೆ 3000 ಅರ್ಚಕರ ಹಿಂದಿಕ್ಕಿ ಆಯ್ಕೆಯಾದ ವಿದ್ಯಾರ್ಥಿ ಮೋಹಿತ್

newsics.com ಅಯೋಧ್ಯೆ: ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವ ಶ್ರೀರಾಮನ ದೇಗುಲ ಉದ್ಘಾಟನೆಗೆ ದಿನಗಣನೆಯಾಗ್ತಿದೆ. ಭವ್ಯ ಮಂದಿರದಲ್ಲಿ ಪೂಜೆಗಾಗಿ ದೇಶದೆಲ್ಲೆಡೆಯಿಂದ ಈ ಹಿಂದೆಯೇ ಪುರೋಹಿತರ ನೇಮಕ ಮಾಡಲಾಗಿದ್ದು,   ಉತ್ತರಪ್ರದೇಶದ ಗಾಜಿಯಾಬಾದ್‌ನ ಮೋಹಿತ್ ಪಾಂಡೆ ಅವರ ಸುದ್ದಿ...
- Advertisement -
error: Content is protected !!