Monday, October 2, 2023

ಜಾಗತಿಕ ತಾಪಮಾನ ದುಷ್ಪರಿಣಾಮ: ಮಂಗಳೂರು, ಮುಂಬೈ ಸೇರಿ 12 ನಗರಗಳಿಗೆ ಅಪಾಯ

Follow Us

newsics.com

ನವದೆಹಲಿ: ಜಾಗತಿಕ ತಾಪಮಾನ ಹಿನ್ನೆಲೆಯಲ್ಲಿ ಮಂಗಳೂರು ಸೇರಿ ದೇಶದ ಕರಾವಳಿ ತೀರಗಳಲ್ಲಿರುವ 12 ನಗರಗಳು ಈ ಶತಮಾನದ ಅಂತ್ಯಕ್ಕೆ ಮುಳುಗಡೆಯಾಗಲಿವೆ ಎಂದು ನಾಸಾ ಹೇಳಿದೆ.

ಜಾಗತಿಕ ತಾಪಮಾನದ ದುಷ್ಪರಿಣಾಮಗಳ ಬಗ್ಗೆ ವಿಶ್ವಸಂಸ್ಥೆಯ 195 ಪರಿಸರ ತಜ್ಞರ ಸಮಿತಿ ನೀಡಿರುವ ಎಚ್ಚರಿಕೆಯ ವರದಿಯನ್ನು (ಐಪಿಸಿಸಿ ವರದಿ) ಅವಲೋಕನ ಮಾಡಿರುವ ಅಮೆರಿಕ ಬಾಹ್ಯಾಕಾಶ ಸಂಸ್ಥೆ (ನಾಸಾ) ಭಾರತಕ್ಕೆ ಈ ಮುನ್ಸೂಚನೆ ನೀಡಿದೆ.

ನಾಸಾ ಮಾಹಿತಿಯ ಪ್ರಕಾರ, ಮಂಗಳೂರು, ಮುಂಬೈ, ಮರ್ಮಗೋವಾ ಕೊಚ್ಚಿ, ಪಾರಾದೀಪ್, ಖಿದೀರ್‌ಪುರ್‌, ವಿಶಾಖಪಟ್ಟಣಂ, ಚೆನ್ನೈ, ತೂತ್ತುಕುಡಿ, ಕಾಂಡ್ಲಾ, ಒಖಾ, ಭಾವನಗರ ಅಪಾಯದಲ್ಲಿವೆ. ಈಗಿನ ಮಾಹಿತಿ ಪ್ರಕಾರ, ಈ ಪ್ರದೇಶಗಳಲ್ಲಿರುವ ಸಮುದ್ರ ಎರಡು ಅಡಿಯಷ್ಟು ಏರಲಿದೆ.

2006-18ರಲ್ಲಿ ನಡೆದ ಅಧ್ಯಯನದ ಪ್ರಕಾರ, ಸಮುದ್ರದ ಮಟ್ಟ ಪ್ರತಿ ವರ್ಷ 3.7 ಮಿ.ಮೀ ನಷ್ಟು ಏರಿಕೆಯಾಗುತ್ತದೆ. 1988ರಿಂದ ಈಚೆಗೆ ಜಾಗತಿಕ ತಾಪಮಾನ ಗಣನೀಯವಾಗಿ ಹೆಚ್ಚಾದ್ದರಿಂದ ಹಿಮಾಚ್ಛಾದಿತ ಪ್ರದೇಶಗಳಲ್ಲಿ ಹಿಮ ಕರಗಿ ಸಮುದ್ರ ಸೇರುತ್ತಿದೆ. ಈ ಹಿಂದೆ ಪ್ರತಿ 100 ವರ್ಷಗಳಿಗೊಮ್ಮೆ ಸಮುದ್ರದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಈಗ ಹತ್ತಾರು ವರ್ಷಗಳಿಗೊಮ್ಮೆ ಏರಿಕೆಯಾಗುತ್ತಿದೆ.

ತಗ್ಗುಪ್ರದೇಶಗಳಿಗೆ ಸಾಗರದ ನೀರು ನುಗ್ಗುವುದು, ಪ್ರತಿ 100 ವರ್ಷಕ್ಕೊಮ್ಮೆ ಆಗುತ್ತಿದ್ದ ಕರಾವಳಿ ಭೂ ಸವಕಳಿ ಈಗ ಪ್ರತಿ ವರ್ಷ ಸಂಭವಿಸುತ್ತಿದೆ. 2050ರ ಒಳಗಾಗಿ ಪ್ರತಿ 6 ರಿಂದ 9 ವಷಕ್ಕೊಮ್ಮೆ ಸಂಭವಿಸಬಹುದು ಎಂದು ನಾಸಾ ಹೇಳಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು

ರಾಜಕೀಯ ಭವಿಷ್ಯ ಶ್ರೀಕೃಷ್ಣನ ಕೈಯಲ್ಲಿ ಇದೆ : ಆನಂದ್ ಸಿಂಗ್

ಸರ್ಕಾರದ ಸಾಲ ತೀರಿಸಲು ಗಾಂಧೀ ವೇಷ ಧರಿಸಿ ಹಣ ನೀಡಲು ಬಂದ ಅಭಿಮಾನಿ

ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ಕೇಂದ್ರದ ಆತಂಕ

ಇಟಲಿಯಲ್ಲಿ ಮೈಸೂರಿನ ಫುಟ್ ಬಾಲ್ ಆಟಗಾರನ ದಾರುಣ ಅಂತ್ಯ

ಬಟ್ಟೆ ಬದಲಿಸುವ ವಿಡಿಯೋ ಬಳಸಿ ಬ್ಲ್ಯಾಕ್’ಮೇಲ್: ವಿವಾಹಿತೆ ಮೇಲೆ ವೃದ್ಧರಿಂದ ಸಾಮೂಹಿಕ ಅತ್ಯಾಚಾರ

ಬಟ್ಟೆ ಬದಲಿಸುವ ವಿಡಿಯೋ ಬಳಸಿ ಬ್ಲ್ಯಾಕ್’ಮೇಲ್: ವಿವಾಹಿತೆ ಮೇಲೆ ವೃದ್ಧರಿಂದ ಸಾಮೂಹಿಕ ಅತ್ಯಾಚಾರ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!