Wednesday, May 31, 2023

ಕಾರವಾರ ಬಂದರು ಕಾಮಗಾರಿಗೆ ಹೈಕೋರ್ಟ್ ತಡೆ

Follow Us

ಕಾರವಾರ: ಇಲ್ಲಿನ ವಾಣಿಜ್ಯ ಬಂದರು ಅಭಿವೃದ್ಧಿಯ ಎರಡನೇ ಹಂತದ ವಿಸ್ತರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಜತೆಗೆ ಕಡಲತೀರವನ್ನು ಹಿಂದಿದ್ದಂತೆ ಮರುಸ್ಥಾಪಿಸಲು ಹೈಕೋರ್ಟ್ ಆದೇಶೀಸಿದೆ.
ಬೈತಖೋಲ್ ಬಂದರು ನಿರಾಶ್ರಿತ ಮೀನುಗಾರರ ಸಹಕಾರ ಸಂಘ ಈ ಕಾಮಗಾರಿ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಕಾಮಗಾರಿಗೆ ಮುನ್ನ ಪರಿಸರ ಪರಿಣಾಮ ಅಧ್ಯಯನ ಪ್ರಾಧಿಕಾರದ ಅನುಮತಿ ಪಡೆದಿಲ್ಲದಿರುವುದರ ಕುರಿತು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದರೂ ಕಾಮಗಾರಿ ಮುಂದುವರಿಸಿದ್ದಕ್ಕೆ ಹೈಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ. ಬಂದರು ಕಾಮಗಾರಿ ಮೀನುಗಾರರ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ...

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...
- Advertisement -
error: Content is protected !!