Sunday, October 1, 2023

ಎಲ್ಲರ ದೃಷ್ಟಿ ಕೇಂದ್ರ ಮುಂಗಡ ಪತ್ರದತ್ತ: ಗ್ರಾಮೀಣ ಉದ್ಯೋಗ ಸೃಷ್ಟಿಗೆ ಆದ್ಯತೆ ಸಾಧ್ಯತೆ

Follow Us

ನವದೆಹಲಿ:  ದೇಶದ ಆದಾಯ ಮತ್ತು ಖರ್ಚು ಕುರಿತ ವಾರ್ಷಿಕ ಲೆಕ್ಕ ಪತ್ರ ಕೇಂದ್ರ ಬಜೆಟ್ ಶನಿವಾರ ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಎರಡನೇ ಬಾರಿಗೆ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. ಕುಸಿದ ಆರ್ಥಿಕ ಪ್ರಗತಿ ದರ, ಮಧ್ಯ ಪ್ರಾಚ್ಯ ಬಿಕ್ಕಟ್ಟಿನ ಪ್ರಭಾವ ಹಾಗೂ ಜಾಗತಿಕ ಆರ್ಥಿಕ ಹಿನ್ನೆಡೆಯ ವಾತಾವರಣದಲ್ಲಿ ಅಭಿವೃದ್ದಿಗೆ ಒತ್ತು ಕೊಡುವ ಬಜೆಟ್ ಮಂಡನೆ ಸವಾಲಿನ ಕೆಲಸವಾಗಿದೆ. ದೇಶದಲ್ಲಿ ಖರೀದಿ ಶಕ್ತಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಬೇಡಿಕೆ ಕುಸಿದಿರುವುದು ಸಂಪನ್ಮೂಲ ಸಂಗ್ರಹದ ಮೇಲೆ ಪರಿಣಾಮ ಬೀರಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ   ಉದ್ಯೋಗಾವಕಾಶಗಳ ಸೃಷ್ಟಿ ಮೂಲಕ  ಆರ್ಥಿಕ ಸಬಲೀಕರಣಕ್ಕೆ ದಾರಿ ಮಾಡಿ ಕೊಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆಗಳಿವೆ. ನಿರೀಕ್ಷೆಯಂತೆ ಸೇನಾ ಪಡೆಯ ಆಧುನೀಕರಣ ಮತ್ತು ಮೂಲ ಭೂತ ಸೌಲಭ್ಯ ಅಭಿವೃದ್ದಿಗೆ ಕೇಂದ್ರ ಮುಂಗಡ ಪತ್ರ ಆದ್ಯತೆ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಆದಾಯ ತೆರಿಗೆ ಸ್ಲಾಬ್ ನಲ್ಲಿ ಗಮನಾರ್ಹ ಬದಲಾವಣೆ  ಸಾಧ್ಯತೆ ಕ್ಷೀಣಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!