Tuesday, December 5, 2023

ಅ.17ರಂದು ಕೊರೋನಾ ವಾರಿಯರ್ಸ್’ಗಳಿಂದ ಸರಳ ದಸರಾ ಉದ್ಘಾಟನೆ

Follow Us

newsics.com
ಬೆಂಗಳೂರು: ಅರಮನೆ ಹಾಗೂ ಚಾಮುಂಡಿ ಬೆಟ್ಟಕ್ಕಷ್ಟೇ ಸೀಮಿತವಾಗಿ ನಡೆಯಲಿರುವ ಈ ಬಾರಿಯ ಸರಳ ದಸರಾ ಅಕ್ಟೋಬರ್ 17ರಂದು ಕೊರೋನಾ ವಾರಿಯರ್ಸ್’ಗಳಿಂದ ಉದ್ಘಾಟನೆಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ
ಕೊರೋನಾ ಸಂಕಷ್ಟ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ಸರಳವಾಗಿ ಆಚರಣೆಗೊಳ್ಳಲಿದ್ದು, ಈ ಬಾರಿ ದಸರಾ ವೇಳೆ ನಡೆಯುವ ಎಲ್ಲಾ ಕಾರ್ಯಕ್ರಮಗಳು ಸಾಮಾಜಿಕ ತಾಣಗಳಲ್ಲಿ ನೇರಪ್ರಸಾರ ಆಗಲಿವೆ ಎಂದು ಸೋಮಶೇಖರ್ ಹೇಲಿದರು.
ಈ ಮಾಹಿತಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು, ಈ ಬಾರಿ ಅಕ್ಟೋಬರ್ 17ರಂದು ಬೆಳಗ್ಗೆ 7.45ರಿಂದ 8.15 ಸಮಯದಲ್ಲಿ ದಸರಾ ಉದ್ಘಾಟನೆಯಾಗಲಿದೆ. ದಸರಾ ಮಹೋತ್ಸವವನ್ನು ಕೊರೋನಾ ವಾರಿಯರ್ಸ್ ಉದ್ಘಾಟಿಸಲಿದ್ದಾರೆ ಎಂದರು.
ಚಾಮುಂಡಿ ಬೆಟ್ಟ, ಅರಮನೆಗೆ ದಸರಾ ಸೀಮಿತವಾಗಿ ನಡೆಯಲಿದೆ. ಅಕ್ಟೋಬರ್ 2ರ ಮಧ್ಯಾಹ್ನ 12 ಗಂಟೆಗೆ ಗಜಪಡೆ ಆಗಮನ ಆಗಲಿದೆ. ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ಭಾಗಿ ಆಗಲಿವೆ. ಅರಮನೆ ಆವರಣದಲ್ಲಿ ಮಾತ್ರ ಜಂಬೂಸವಾರಿ ನಡೆಯಲಿದೆ. ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಎಂಬುದಾಗಿ ಮಾಹಿತಿ ನೀಡಿದರು.

ಜಂಬೂಸವಾರಿ ಈ ಬಾರಿ ಅರಮನೆ ಆವರಣಕ್ಕೆ ಸೀಮಿತ

ಮತ್ತಷ್ಟು ಸುದ್ದಿಗಳು

vertical

Latest News

ವಿಜಯಪುರ ಗೋದಾಮು ದುರಂತ : ಆರು ಮೃತದೇಹಗಳು ಪತ್ತೆ

Newsics.com ವಿಜಯಪುರ : ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಆರು ಕಾರ್ಮಿಕರ ಮೃತದೇಹಗಳನ್ನು ಹೊರ...

ವರುಣನ ಅಬ್ಬರಕ್ಕೆ ತಮಿಳುನಾಡು ತತ್ತರ : ಐದು ಮಂದಿ ಸಾವು

Newsics.com ತಮಿಳುನಾಡು : ಮಿಚೌಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಧಾರಾಕಾರ ಮಳೆಯಿಂದಾಗಿ ಇಡೀ ಚೆನ್ನೈ ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಿಚೌಂಗ್ ಚಂಡಮಾರುತದಿಂದಾಗಿ ಇಲ್ಲಿಯವರೆಗೆ ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಚೆನ್ನೈನಲ್ಲಿ ವೇಗವಾಗಿ ಬೀಸುತ್ತಿರುವ ಗಾಳಿ...

ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ ಕಿಡಿಗೇಡಿಗಳು

Newsics.com ಮಧ್ಯಪ್ರದೇಶ : ಮಧ್ಯಪ್ರದೇಶ ಸೇರಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸದೆ. ಈ ವೇಳೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕುದಿಯುವ ನೀರನ್ನು ಎರಚಿದ ಒಂದೇ...
- Advertisement -
error: Content is protected !!