Wednesday, May 31, 2023

ಉತ್ತರ ಕನ್ನಡದಲ್ಲಿ ಹೆಚ್ಚಿದ ಮಹಿಳೆಯರ ನಾಪತ್ತೆ ಪ್ರಕರಣ: ಮತ್ತೆ ಗರಿಗೆದರಿದ ಲವ್ ಜಿಹಾದ್ ಗುಮಾನಿ

Follow Us

newsics.com

ಕಾರವಾರ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯಲ್ಲಿ ಯುವತಿ ಹಾಗೂ‌ ಮಹಿಳೆಯರ ನಾಪತ್ತೆ ಕೇಸ್‌ಗಳು ಗಣನೀಯವಾಗಿ ಹೆಚ್ಚಳವಾಗಿದೆ.

ಕಳೆದ 10 ತಿಂಗಳಿನಲ್ಲಿ 232 ಯುವತಿಯರು ಗಣನೀಯ ಪ್ರಮಾಣದಲ್ಲಿ ನಾಪತ್ತೆಯಾಗಿರುವುದು ಶಾಂತಿಯುತ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.
ಮಹಿಳೆಯರು ಅದರಲ್ಲೂ ಕಾಲೇಜು ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಮರೆಯಾಗುತ್ತಿರುವುದು ಉತ್ತರ ಕನ್ನಡ ಜಿಲ್ಲೆಯ ಜನರಿಗೆ ತಲೆನೋವಾಗಿ ಪರಿಣಮಿಸಿದೆ.
ಗ್ರಾಮೀಣ ಭಾಗದಲ್ಲೇ ಅಧಿಕ ಕಣ್ಮರೆ ಪ್ರಕರಣಗಳು ನಡೆಯುತ್ತಿರುವುದು ಲವ್ ಜಿಹಾದ್ ಗುಮಾನಿಯನ್ನು ಹೆಚ್ಚಿಸಿದೆ.

2019ರಲ್ಲಿ 257 ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 236 ಪ್ರಕರಣಗಳಲ್ಲಿ ನಾಪತ್ತೆಯಾದವರನ್ನು ಪೊಲೀಸರು ಹುಡುಕಿದ್ದರೆ, 21 ಇನ್ನೂ ತನಿಖೆಯಲ್ಲಿದ್ದವು. 2020ರ ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ 212 ನಾಪತ್ತೆ ಪ್ರಕರಣ ದಾಖಲಾಗಿ 197 ಮಂದಿ ಪತ್ತೆಯಾಗಿದ್ದಾರೆ. 15 ಮಂದಿಗಾಗಿ ಇನ್ನೂ ಹುಡುಕಾಟ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ದಾಖಲಾದ ನಾಪತ್ತೆ ಪ್ರಕರಣಗಳಲ್ಲಿ ಬಹುತೇಕ ಕೇಸ್‌ಗಳು ಪ್ರೀತಿ – ಪ್ರೇಮ, ಅನೈತಿಕ ಸಂಬಂಧಗಳಿಂದ ಮನೆ ಬಿಟ್ಟು ಹೋದವರಾಗಿದ್ದಾರೆ‌. ಕೆಲವು ಪ್ರಕರಣಗಳಲ್ಲಿ ಅಪಹರಣದ ಶಂಕೆ ಇದೆ ಎಂದು ತಿಳಿದುಬಂದಿದೆ.

ಈ ರೀತಿ ವಿವಾಹಿತ ಮಹಿಳೆಯರು, ಶಾಲಾ – ಕಾಲೇಜು ಯುವತಿಯರು ನಾಪತ್ತೆ ಹೆಚ್ಚಾಗಿರುವುದಕ್ಕೆ ಸಾಮಾಜಿಕ ಜಾಲತಾಣಗಳೂ ಹೆಚ್ಚಿನ ಪ್ರಮಾಣದಲ್ಲಿ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಲವ್ ಜಿಹಾದ್‌ನಂತಹ ಪ್ರಕರಣಗಳು ಕೂಡ ಶಿರಸಿ, ಸಿದ್ದಾಪುರ ತಾಲೂಕಿನಲ್ಲಿ ದಾಖಲಾಗುತ್ತಿರುವುದು ಹೆಣ್ಣುಮಕ್ಕಳಿರುವ ಕುಟುಂಬವನ್ನು ಆತಂಕಕ್ಕೀಡುಮಾಡಿದೆ. ಲವ್ ಜಿಹಾದ್ ಆರೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರ ನಾಪತ್ತೆ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!