ನವದೆಹಲಿ: ಇರಾನ್ ಸೇನಾ ನಾಯಕ ಕಾಸಿಂ ಸೊಲೆಮಾನಿ ಹತ್ಯೆ ಬಳಿಕ ಅಮೆರಿಕ ಮತ್ತು ಇರಾನ್ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಯುದ್ಧದ ಕಾರ್ಮೋಡ ಕವಿದಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.
ಈ ಸಂಬಂಧ ಭಾನುವಾರ ರಾತ್ರಿ ಟ್ವೀಟ್ ಮಾಡಿರುವ ಅವರು, ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ನಡೆಯಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈಗ ತಾನೇ ಇರಾನ್ನ ವಿದೇಶಾಂಗ ಸಚಿವ ಮೊಹಮ್ಮದ್ ಜಾವದ್ ಜರೀಫ್ರೊಂದಿಗೆ ಮಾತುಕತೆ ನಡೆಸಿದೆ. ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಗಂಭೀರ ತಿರುವು ಪಡೆದುಕೊಂಡಿದೆ. ಮುಂದಾಗುವ ಆತಂಕದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸುತ್ತಿದೆ. ಪರಸ್ಪರ ಸಂಪರ್ಕದಲ್ಲಿರಲು ಇಬ್ಬರು ಒಪ್ಪಿದ್ದಾರೆಂದು ಜೈಶಂಕರ್ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಹದಗೆಟ್ಟ ಇರಾನ್- ಅಮೆರಿಕ ಸಂಬಂಧ; ಭಾರತ ಕಳವಳ
Follow Us