Monday, October 2, 2023

ಡೆಲ್ಟಾ ಪ್ಲಸ್’ನಿಂದ ಮೃತಪಟ್ಟ ಮುಂಬೈ ಮಹಿಳೆ: ಇದು ದೇಶದ ಮೊದಲ ಸಾವು

Follow Us

newsics.com

ಮುಂಬೈ(ಮಹಾರಾಷ್ಟ್ರ): ಕೋವಿಡ್ ಮೂರನೇ ಅಲೆಯ ಆತಂಕದ ನಡುವೆಯೇ ಮುಂಬೈನಲ್ಲಿ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ಸೋಂಕಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇದು ದೇಶದಲ್ಲೇ ಮೊದಲ ಸಾವು ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಹೇಳಿದೆ.

ಕಳೆದ ಜುಲೈ 27ರಂದು 63 ವರ್ಷದ ಮಹಿಳೆ ಡೆಲ್ಟಾ ಪ್ಲಸ್’ನಿಂದ ಸಾವಿಗೀಡಾಗಿದ್ದಾರೆ. ಅವರು ಜುಲೈ 21ರಂದು ಕೋವಿಡ್ ಸೋಂಕಿಗೆ ಒಳಗಾಗಿದ್ದರು ಎಂದು
ಬಿಎಂಸಿ ತಿಳಿಸಿದೆ.

ಮೃತಪಟ್ಟ ಮಹಿಳೆಗೆ ಕೋವಿಡ್ ಸೋಂಕಿನ ಲಸಿಕೆಯ ಎರಡೂ ಡೋಸ್ ಗಳನ್ನು ನೀಡಲಾಗಿತ್ತು. ಯಾವುದೇ ಟ್ರಾವೆಲಿಂಗ್ ಹಿಸ್ಟರಿ ಕೂಡ ಇಲ್ಲ. ಮಹಿಳೆ ಕೆಲವು ವರ್ಷಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಮಹಿಳೆಯ ಜೀನೋಮ್ ಸೀಕ್ವೆನ್ಸಿಂಗ್ ವರದಿಯನ್ನು ಇತ್ತೀಚೆಗೆ ಪಡೆಯಲಾಗಿತ್ತು, ಮೃತ ಮಹಿಳೆ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ಸೋಂಕಿಗೆ ಒಳಗಾಗಿದ್ದರು ಎಂದು ವರದಿ ತಿಳಿಸಿದೆ ಎಂದು ಬಿಎಂಸಿ ಹೇಳಿದೆ.

ಮೃತ ಮಹಿಳೆಯ ಕುಟುಂಬದ ಆರು ಮಂದಿ ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಆ ಪೈಕಿ ಇನ್ನೊಬ್ಬರು ಕೂಡ ಡೆಲ್ಟಾ ಪ್ಲಸ್ ಸೋಂಕಿಗೆ ಒಳಗಾಗಿದ್ದಾರೆ. ಇನ್ನುಳಿದ ನಾಲ್ವರ ಜೀನೋಮ್ ಸೀಕ್ವೆನ್ಸಿಂಗ್ ಇನ್ನಷ್ಟೇ ಬರಬೇಕಿದೆ ಎಂದು ಬಿಎಂಸಿ ಅಧಿಕಾರಿಗಳು‌ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಮತ್ತೆ ಜಾರಿ ಸಂಭವ

ನಾಯಿ, ಜಾನುವಾರುಗಳ ನೋಂದಣಿಗೆ ಸೂಚಿಸಿದ ಮಹಾನಗರ ಪಾಲಿಕೆ

ಒಂದೇ ದಿನ 40,120 ಜನರಿಗೆ ಕೊರೋನಾ ಸೋಂಕು 42,295 ಮಂದಿ ಗುಣಮುಖ, 585 ಜನರ ಸಾವು

ಬೆಂಗಳೂರಿನಲ್ಲಿ 543 ಮಕ್ಕಳಿಗೆ ಕೊರೋನಾ ಸೋಂಕು: ಬಿಬಿಎಂಪಿ ಅಧಿಕೃತ ಮಾಹಿತಿ

ಕಂದಹಾರ್ ವಶಪಡಿಸಿಕೊಂಡ ತಾಲಿಬಾನ್, ಎಲ್ಲೆಡೆ ಅರಾಜಕತೆ

10 ವರ್ಷದ ಬಾಲಕಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಸೆಪ್ಟೆಂಬರ್’ನಲ್ಲಿ 1ರಿಂದ 8ನೇ ತರಗತಿ ಆರಂಭ: ಸಚಿವ ನಾಗೇಶ್

‘ಕರ್ನಾಟಕದ ನೆಲ್ಸನ್ ಮಂಡೇಲಾ’ ಖ್ಯಾತಿಯ ಡಿಯಾಗೋ‌ ಬಸ್ತ್ಯಾವ್ ಇನ್ನಿಲ್ಲ

https://newsics.com/news/latest/now-available-alcoholic-ice-cream/80808/

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!