Sunday, March 26, 2023

ಶ್ರೀಗಳ ದರ್ಶನಕ್ಕೆ ಭಕ್ತರ ದಂಡು, ಚೇತರಿಕೆಗೆ ಪ್ರಾರ್ಥಿಸಿ ಪೂಜೆ

Follow Us

* ಉಡುಪಿಯಲ್ಲಿ ಅಘೋಷಿತ ಬಂದ್ ವಾತಾವರಣ

ಉಡುಪಿ: ಮಠಕ್ಕೆ‌ ಮರಳಿದ ಪೇಜಾವರ ಶ್ರೀಗಳ ದರ್ಶನಕ್ಕೆ ಗಣ್ಯರು, ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ನಿತ್ಯ ಆಸ್ಥಾನ ಪೂಜೆ ನಡೆಯುವ ಸ್ಥಳದ ಸಮೀಪದಲ್ಲಿರುವ ಅವರ ಕೋಣೆಯಲ್ಲೇ ಪೇಜಾವರ ಶ್ರೀಗಳಿಗೆ ವೆಂಟಿಲೇಟರ್ ಅಳವಡಿಸಲಾಗಿದ್ದು, ಆರು ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಈ‌ ಮಧ್ಯೆ, ಶ್ರೀಗಳ ಚೇತರಿಕೆಗೆ ಪ್ರಾರ್ಥಿಸಿ ಉಡುಪಿ‌ ಕೃಷ್ಣ ಮಠದಲ್ಲಿ ವಿಷ್ಣುಸಹಸ್ರನಾಮ ಪಾರಾಯಣ ನಡೆಸಲಾಗುತ್ತಿದೆ. ರಾಜ್ಯದ ವಿವಿಧೆಡೆ ಭಕ್ತರು ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಪೂಜೆ ಸಲ್ಲಿಸುತ್ತಿದ್ದಾರೆ.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸೋದೆ, ಅದಮಾರು, ಪಲಿಮಾರು, ಕಾಣಿಯೂರು, ರಾಮಚಂದ್ರಾಪುರ ಮಠದ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಪೇಜಾವರ ಶ್ರೀಗಳ ದರ್ಶನ‌ ಪಡೆದರು. ಸ್ವಲ್ಪ ಹೊತ್ತಿನಲ್ಲಿ ಸಿಎಂ ಯಡಿಯೂರಪ್ಪ ದರ್ಶನ ಪಡೆಯಲಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ವಿಷಮಿಸುತ್ತಲೇ ಇದ್ದು, ಕೃಷ್ಣಮಠ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಎಲ್ಲರಲ್ಲೂ ದುಃಖ ಮಡುಗಟ್ಟಿದೆ. ಉಡುಪಿಯಾದ್ಯಂತ ಅಘೋಷಿತ ಬಂದ್ ವಾತಾವರಣವಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ

newsics.com ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ...

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

newsics.com ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

newsics.com ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ. ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್...
- Advertisement -
error: Content is protected !!