Tuesday, December 5, 2023

ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲೂ ಅನುಮೋದನೆ: ಶೀಘ್ರದಲ್ಲೇ ರಾಷ್ಟ್ರಪತಿ ಅಂಕಿತ

Follow Us

newsics.com

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ಮೀಸಲಿಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ಗುರುವಾರ ರಾತ್ರಿ ಅನುಮೋದನೆ ದೊರೆತಿದೆ.

ಲೋಕಸಭೆಯಲ್ಲಿ ಬುಧವಾರವಷ್ಟೇ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕರಿಸಲಾಗಿತ್ತು. ‘ನಾರಿ ಶಕ್ತಿ ವಂದನಾ ಅಧಿನಿಯಮಕ್ಕೆ

(Nari Shakti Vandan Adhiniyam)’ ರಾಜ್ಯಸಭೆಯು ಸರ್ವಾನುಮತದಿಂದ ಅನುಮೋದನೆ ನೀಡಿದೆ.

ವಿಧೇಯಕದ ಪರ 215 ಸಂಸದರು ಮತ ಚಲಾಯಿಸಿದರೆ, ವಿರುದ್ಧ ಯಾವ ಸಂಸದರೂ ಮತ ಚಲಾಯಿಸಲಿಲ್ಲ.

ಮಸೂದೆಗೆ ಉಭಯ ಸದನಗಳಲ್ಲಿ ಸರ್ವಾನುಮತದ ಅನುಮೋದನೆ ದೊರೆತಿದ್ದು, ಮುಂದಿನ ಹಂತದಲ್ಲಿ ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಿಕೊಡಲಾಗುತ್ತದೆ. ರಾಷ್ಟ್ರಪತಿಗಳ ಸಹಿ ದೊರೆತ ನಂತರ ‘ನಾರಿ ಶಕ್ತಿ ವಂದನ್ ಕಾಯ್ದೆ’ ಕಾನೂನಾಗಿ ಜಾರಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿ, ಮಸೂದೆಯಿಂದ ಮಾತ್ರ ಮಹಿಳಾ ಶಕ್ತಿಗೆ ವಿಶೇಷ ಗೌರವ ಸಿಗುತ್ತಿಲ್ಲ. ಈ ಮಸೂದೆಯ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳ ಸಕಾರಾತ್ಮಕ ಚಿಂತನೆಯು ನಮ್ಮ ದೇಶದ ಮಹಿಳಾ ಶಕ್ತಿಗೆ ಹೊಸ ಶಕ್ತಿಯನ್ನು ನೀಡುತ್ತದೆ. ಮಹಿಳಾ ನಾಯಕತ್ವವೇ ಉಜ್ವಲ ಭವಿಷ್ಯದ ಭರವಸೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಸೂದೆ ಅಂಗೀಕಾರಗೊಂಡಿರುವುದು ಭಾರತೀಯ ರಾಜಕೀಯದಲ್ಲಿ ಒಂದು ಮೈಲಿಗಲ್ಲು ಎಂದು ಹೇಳಿದರು.

ಬರ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆಗೆ ನಿರ್ಧಾರ: ಡಾ. ಎಚ್.ಸಿ. ಮಹದೇವಪ್ಪ

ಆನೆ ಮತ್ತು ಖಡ್ಗಮೃಗ ಕಾಳಗ; ಈ ವಿಡಿಯೋ ನೋಡಿ…

ಅ.13ಕ್ಕೆ ದೇಶದ ಎಲ್ಲೆಡೆ ಮಲ್ಟಿಫ್ಲೆಕ್ಸ್‌ನಲ್ಲಿ ಟಿಕೆಟ್‌ ದರ 99 ರೂ. ಮಾತ್ರ

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!