Tuesday, March 28, 2023

ಲೈಂಗಿಕ ಕಿರುಕುಳ ಆರೋಪ: 24 ಗಂಟೆಯೊಳಗೆ ರಾಜೀನಾಮೆ ನೀಡಲು ಬ್ರಿಜ್ ಭೂಷಣ್‌ಗೆ ಕ್ರೀಡಾ ಇಲಾಖೆ ಸೂಚನೆ

Follow Us

newsics.com

ನವದೆಹಲಿ: ಮುಂದಿನ 24 ಗಂಟೆಯೊಳಗೆ ರಾಜೀನಾಮೆ ನೀಡುವಂತೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಕ್ರೀಡಾ ಸಚಿವಾಲಯ ಗುರುವಾರ ರಾತ್ರಿ ಅಂತಿಮ ಸೂಚನೆ ನೀಡಿದೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಮ್ಮ ನಿವಾಸದಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳನ್ನು ಭೇಟಿ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.
ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ರವಿ ದಹಿಯಾ ಗುರುವಾರ ರಾತ್ರಿ 10 ಗಂಟೆ ವೇಳೆಗೆ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಕ್ರೀಡಾ ಇಲಾಖೆ ಬ್ರಿಜ್ ಭೂಷಣ್‌ಗೆ ಈ ಸೂಚನೆ ನೀಡಿದೆ.

ಈ ಮಧ್ಯೆ, ಅವರ ಬಳಿ ಯಾವುದಾದರೂ ಪುರಾವೆಗಳಿದ್ದರೆ ಅವುಗಳನ್ನು ಸಾರ್ವಜನಿಕಗೊಳಿಸಿ ಎಂದು ನಾನು ಮೊದಲ ದಿನವೇ ಹೇಳಿದ್ದೆ. ನನ್ನ ಮೇಲಿನ ಲೈಂಗಿಕ ಕಿರುಕುಳ ಆರೋಪ ಸಾಬೀತಾದರೆ ನಾನು ಗಲ್ಲಿಗೇರಲೂ ಸಿದ್ಧ ಎಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ.

ನಾನು ಎಫ್‌ಐಆರ್ ಹಾಗೂ ಸಿಬಿಐ ಎದುರಿಸಲು ಸಿದ್ಧನಿದ್ದೇನೆ. ಭಾರತದ ಅತ್ಯುನ್ನತ ಕಾನೂನು ಪ್ರಾಧಿಕಾರವನ್ನು ಎದುರಿಸಲು ನಾನು ಸಿದ್ಧ ಎಂದು ಅವರು ಹೇಳಿದ್ದಾರೆ.

ಅಧ್ಯಕ್ಷಗಿರಿ ನನ್ನ ವೈಯಕ್ತಿಕ ಹುದ್ದೆಯಲ್ಲ. ನಾನು ಕಾರ್ಯಕಾರಿ ಸಮಿತಿ ಸಭೆಗೆ ಈಗಾಗಲೇ ಮನವಿ ಮಾಡಿದ್ದೇನೆ. ಸಮಿತಿ ಯಾವುದೇ ನಿರ್ಧಾರ ಕೈಗೊಂಡರೂ ನಾನು ಒಪ್ಪುತ್ತೇನೆ. ನಾನು ಅವರಿಗಿಂತ ದೊಡ್ಡವನಲ್ಲ, ದೇಶಕ್ಕಿಂತ ದೊಡ್ಡವನಲ್ಲ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

ಆತ ನನ್ನ ಬದುಕನ್ನೇ ಹಾಳು‌ ಮಾಡಿದ: ನಟಿ ಜಾಕ್ವೆಲಿನ್ ಅಳಲು

ಬಹುಭಾಷಾ ನಟಿ ಅಪರ್ಣಾ ಜತೆ ಕಾಲೇಜು ವಿದ್ಯಾರ್ಥಿ ಅನುಚಿತ ವರ್ತನೆ

ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತೀವ್ರ ಆಕ್ರೋಶ

ಇಸ್ರೋದಲ್ಲಿ ಉದ್ಯೋಗ ಪಡೆದ ಬಸ್ ಚಾಲಕನ ಮಗಳು ಸನಾ‌ ಅಲಿ

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!