Sunday, March 26, 2023

ಮತ್ಸ್ಯ ಕ್ಷಾಮ; ಕಾರವಾರ ಕಡಲತೀರದಲ್ಲಿ ಸೀ ಬರ್ಡ್ ಕ್ಷೀಣ

Follow Us

ಕಾರವಾರ: ಕಾರವಾರ ಕಡಲತೀರದಲ್ಲಿ ಸೀಬರ್ಡ್ ಪಕ್ಷಿಗಳ ಕಲರವ ಕಾಣದಂತಾಗಿದೆ.
ಈ ಬಾರಿ ಉಂಟಾಗಿರುವ ಮತ್ಸ್ಯ ಕ್ಷಾಮ ಸೀಬರ್ಡ್ ಪಕ್ಷಿಗಳ ಸಂಖ್ಯೆ ಕಡಿಮೆಯಾಗಲು ಮುಖ್ಯ ಕಾರಣ ಎನ್ನಲಾಗಿದೆ.
ಡಿಸೆಂಬರ್, ಜನವರಿಯಲ್ಲಿ ಸೀಬರ್ಡ್ ಪಕ್ಷಿಗಳು ಕಾರವಾರದ ಕಡಲತೀರಗಳಲ್ಲಿ ತುಂಬಿಕೊಳ್ಳುತ್ತಿದ್ದವು. ರಷ್ಯಾ ಮೂಲದ ಸೀಬರ್ಡ್ ಪಕ್ಷಿಗಳು ಕಾರವಾರದ ಕಡಲತೀರಕ್ಕೆ ಮೆರುಗು ತರುತ್ತಿದ್ದವು.
ಪ್ರತಿ ವರ್ಷ ನವೆಂಬರ್ ತಿಂಗಳಿನಿಂದ ಈ “ಸೀ ಈಗಲ್’ ಎಂದು ಕರೆಯುವ ಸೀಬರ್ಡ್ ಪಕ್ಷಿಗಳು ಹಾಗೂ ಬೆಳ್ಳಕ್ಕಿಗಳು ಕಡಲತೀರಕ್ಕೆ ವಲಸೆ ಬರುತ್ತಿದ್ದವು. ರಷ್ಯಾದಿಂದ ಹಾರಿಬರುವ ಈ ಪಕ್ಷಿಗಳು ಚಳಿಗಾಲದ ಎರಡು ಮೂರು ತಿಂಗಳ ಕಾಲ ಕಾರವಾರದಲ್ಲಿ ಬೀಡುಬಿಟ್ಟು ಮರಿಗಳನ್ನು ಮಾಡಿಕೊಂಡ ಬಳಿಕ ಮತ್ತೆ ತಮ್ಮ ಮೂಲ ಸ್ಥಳಕ್ಕೆ ವಾಪಸ್ ತೆರಳುತ್ತಿದ್ದವು.
ಸಾವಿರ ಸಾವಿರ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದ ಈ ಸೀಬರ್ಡ್ ಪಕ್ಷಿಗಳನ್ನು ನೋಡಿಯೇ ಕಾರವಾರದ ಅರಗಾ ಗ್ರಾಮದಲ್ಲಿರುವ ಕದಂಬ ನೌಕಾನೆಲೆ ಯೋಜನೆಗೆ ಸೀಬರ್ಡ್ ನೌಕಾನೆಲೆ ಎಂದು ಹೆಸರಿಡಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ

newsics.com ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ...

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

newsics.com ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

newsics.com ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ. ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್...
- Advertisement -
error: Content is protected !!