Saturday, December 2, 2023

ಮತ್ಸ್ಯ ಕ್ಷಾಮ; ಕಾರವಾರ ಕಡಲತೀರದಲ್ಲಿ ಸೀ ಬರ್ಡ್ ಕ್ಷೀಣ

Follow Us

ಕಾರವಾರ: ಕಾರವಾರ ಕಡಲತೀರದಲ್ಲಿ ಸೀಬರ್ಡ್ ಪಕ್ಷಿಗಳ ಕಲರವ ಕಾಣದಂತಾಗಿದೆ.
ಈ ಬಾರಿ ಉಂಟಾಗಿರುವ ಮತ್ಸ್ಯ ಕ್ಷಾಮ ಸೀಬರ್ಡ್ ಪಕ್ಷಿಗಳ ಸಂಖ್ಯೆ ಕಡಿಮೆಯಾಗಲು ಮುಖ್ಯ ಕಾರಣ ಎನ್ನಲಾಗಿದೆ.
ಡಿಸೆಂಬರ್, ಜನವರಿಯಲ್ಲಿ ಸೀಬರ್ಡ್ ಪಕ್ಷಿಗಳು ಕಾರವಾರದ ಕಡಲತೀರಗಳಲ್ಲಿ ತುಂಬಿಕೊಳ್ಳುತ್ತಿದ್ದವು. ರಷ್ಯಾ ಮೂಲದ ಸೀಬರ್ಡ್ ಪಕ್ಷಿಗಳು ಕಾರವಾರದ ಕಡಲತೀರಕ್ಕೆ ಮೆರುಗು ತರುತ್ತಿದ್ದವು.
ಪ್ರತಿ ವರ್ಷ ನವೆಂಬರ್ ತಿಂಗಳಿನಿಂದ ಈ “ಸೀ ಈಗಲ್’ ಎಂದು ಕರೆಯುವ ಸೀಬರ್ಡ್ ಪಕ್ಷಿಗಳು ಹಾಗೂ ಬೆಳ್ಳಕ್ಕಿಗಳು ಕಡಲತೀರಕ್ಕೆ ವಲಸೆ ಬರುತ್ತಿದ್ದವು. ರಷ್ಯಾದಿಂದ ಹಾರಿಬರುವ ಈ ಪಕ್ಷಿಗಳು ಚಳಿಗಾಲದ ಎರಡು ಮೂರು ತಿಂಗಳ ಕಾಲ ಕಾರವಾರದಲ್ಲಿ ಬೀಡುಬಿಟ್ಟು ಮರಿಗಳನ್ನು ಮಾಡಿಕೊಂಡ ಬಳಿಕ ಮತ್ತೆ ತಮ್ಮ ಮೂಲ ಸ್ಥಳಕ್ಕೆ ವಾಪಸ್ ತೆರಳುತ್ತಿದ್ದವು.
ಸಾವಿರ ಸಾವಿರ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದ ಈ ಸೀಬರ್ಡ್ ಪಕ್ಷಿಗಳನ್ನು ನೋಡಿಯೇ ಕಾರವಾರದ ಅರಗಾ ಗ್ರಾಮದಲ್ಲಿರುವ ಕದಂಬ ನೌಕಾನೆಲೆ ಯೋಜನೆಗೆ ಸೀಬರ್ಡ್ ನೌಕಾನೆಲೆ ಎಂದು ಹೆಸರಿಡಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...

ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ

newsics.com ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...
- Advertisement -
error: Content is protected !!