Wednesday, May 31, 2023

ಮನೆ ಬಾಗಿಲಿಗೆ ಬರಲಿದೆ ಶ್ರೀಮಾತಾ ವೈಷ್ಣೋದೇವಿ ಪ್ರಸಾದ

Follow Us

ಶ್ರೀನಗರ: ದೇಶದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀನಗರದ ಶ್ರೀಮಾತಾ ವೈಷ್ಣೋದೇವಿ ಪ್ರಸಾದ ಇನ್ಮುಂದೆ ನಿಮಗೆ ಮನೆಯ ಬಾಗಿಲಿನಲ್ಲೇ ಲಭ್ಯವಾಗಲಿದೆ. ಇಂತಹದೊಂದು ವಿನೂತನ ಪ್ರಯತ್ನಕ್ಕೆ ಶ್ರೀಮಾತಾವೈಷ್ಣೋದೇವಿ ದೇವಾಲಯದ ಆಡಳಿತ ಮಂಡಳಿ ಮುನ್ನುಡಿ ಬರೆದಿದ್ದು, ಸೋಮವಾರದಿಂದ ಈ ಸೇವೆ ವಿದ್ಯುಕ್ತವಾಗಿ ಆರಂಭಗೊಂಡಿದೆ.

ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅಧ್ಯಕ್ಷತೆಯಲ್ಲಿ ನಡೆದ ಎಸ್‍ಎಂವಿಡಿಎಸ್‍ಬಿ ಸಭೆಯಲ್ಲಿ ಈ ಸೇವೆಗೆ ಚಾಲನೆ ದೊರೆತಿದ್ದು, ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗದ ಭಕ್ತರು ತಮ್ಮ ಮನೆಗೆ ಪ್ರಸಾದ ತರಿಸಿಕೊಳ್ಳಬಹುದಾಗಿದೆ.

ಎಸ್‍ಎಂವಿಡಿಎಸ್‍ಬಿ ವೆಬ್‍ಸೈಟ್ ಮೂಲಕ ಪ್ರಸಾದವನ್ನು ಭಕ್ತರು ಬುಕ್ ಮಾಡಬಹುದಾಗಿದೆ. ಬುಕ್ಕಿಂಗ್ ನ 72 ಗಂಟೆಯಲ್ಲಿ ಭಕ್ತರ ಹೆಸರಿನಲ್ಲಿ ಪೂಜೆ ನಡೆಯುತ್ತದೆ. ಬಳಿಕ ಪೋಸ್ಟ್‍ನಲ್ಲಿ ಪ್ರಸಾದ ಕಳುಹಿಸಲಾಗುತ್ತದೆ. ಇದುವರೆಗೂ 1500ಕ್ಕೂ ಅಧಿಕ ಜನರಿಗೆ ಪೋಸ್ಟ್ ಮೂಲಕ ಪ್ರಸಾದ ಕಳುಹಿಸಲಾಗಿದೆ . ಇದಕ್ಕಾಗಿ ದೇವಾಲಯದ ಆಡಳಿತ ಮಂಡಳಿ ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ...

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ. ಮೊದಲು...
- Advertisement -
error: Content is protected !!