Sunday, October 1, 2023

ವಿಐಪಿ ರಕ್ಷಣಾ ಕಾರ್ಯದಿಂದ NSG ಗೆ ಮುಕ್ತಿ

Follow Us

ನವದೆಹಲಿ: ಗಣ್ಯ ವ್ಯಕ್ತಿಗಳ ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ತಂಡದಿಂದ ಎನ್‌ಎಸ್‌ಜಿ ಕಮಾಂಡೋಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಕೇಂದ್ರದ ಈ ನಿರ್ಧಾರದಿಂದ ಸುಮಾರು 450 ಕಮಾಂಡೋಗಳನ್ನು ವಿಐಪಿ ಭದ್ರತಾ ಕಾರ್ಯದಿಂದ ಮುಕ್ತಗೊಳಿಸಲಾಗುತ್ತಿದೆ. ಅವರು ದೆಹಲಿ ಸಮೀಪದ ಗುರುಗ್ರಾಮದಲ್ಲಿನ ಮುಖ್ಯ ಕಚೇರಿ ಅಥವಾ ದೇಶದ ವಿವಿಧ ಭಾಗಗಳಲ್ಲಿನ ಐದು ಭಯೋತ್ಪಾದನಾ ನಿಗ್ರಹ ಘಟಕಗಳನ್ನು ಸೇರಿಕೊಳ್ಳಲಿದ್ದಾರೆ.
ಸುಮಾರು ಎರಡು ದಶಕಗಳ ಬಳಿಕ ವಿಐಪಿ ರಕ್ಷಣಾ ಕರ್ತವ್ಯದಿಂದ ಅತ್ಯುನ್ನತ ಭಯೋತ್ಪಾದನಾ ನಿಗ್ರಹ ದಳದ ಬ್ಲ್ಯಾಕ್ ಕ್ಯಾಟ್ ಕಮಾಂಡೋಗಳನ್ನು ಹಿಂಪಡೆಯಲಾಗುತ್ತಿದೆ. ಎನ್‌ಎಸ್‌ಜಿ ರಚನೆಯ ಉದ್ದೇಶವೇ ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆ. ಅದನ್ನು ಬಿಟ್ಟು ಬೇರೆ ಉದ್ದೇಶಕ್ಕೆ ಅವರನ್ನು ಬಳಸಿಕೊಳ್ಳಲಾಗುತ್ತಿತ್ತು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ವಿವಿಧ ಗಣ್ಯರಿಗೆ ನೀಡಿರುವ ಎನ್‌ಎಸ್‌ಜಿಯ ಭದ್ರತೆಯನ್ನೂ ಹಿಂಪಡೆಯಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!