newsics.com
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ 26 ಮಸೂದೆಗಳನ್ನು ಮಂಡಿಸಲು ಸಿದ್ಧತೆ ಮಾಡಿಕೊಂಡಿದೆ. ಜತೆಗೆ, ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಆದ್ಯತೆಯ ಮೇಲೆ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಕೃಷಿ ಸಚಿವರಾಗಿರುವ ನರೇಂದ್ರ ಸಿಂಗ್ ತೋಮರ್ ಈ ಬಿಲ್ ಸಂಸತ್ನಲ್ಲಿ ಮಂಡನೆ ಮಾಡಲಿದ್ದಾರೆ.
ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಬಿಲ್- 2021 ಕೂಡ ಮಂಡನೆಯಾಗಲಿದೆ.
ಏರ್ಟೆಲ್, ವೊಡಾಫೋನ್ ಬೆನ್ನಲ್ಲೇ ಜಿಯೋ ಕೂಡ ಈಗ ದುಬಾರಿ: ಡಿಸೆಂಬರ್ನಿಂದ ಹೊಸ ದರ ಜಾರಿ