newsics.com
ನವದೆಹಲಿ: ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದು ಆಸ್ಪತ್ರೆ ಸೇರಿರುವ ಆಮ್ ಆದ್ಮ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ದೆಹಲಿಯ ಮಾಜಿ ಸಚಿವರೂ ಆಗಿರುವ ಜೈನ್ ಅವರು ಇಂದು (ಗುರುವಾರ) ಬೆಳಗ್ಗೆ ಸ್ನಾನಗೃಹದಲ್ಲಿ ತಲೆ ತಿರುಗಿ ಬಿದ್ದಿದ್ದರು.
ಜೈನ್ ಅವರನ್ನು ಮೊದಲು ದೀನ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲೋಕ ನಾಯಕ ಜೈ ಪ್ರಕಾಶ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜೈನ್ ಅವರನ್ನು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬಂಧಿಸಿದೆ.
ಜೈನ್ ಈ ಹಿಂದೆಯೂ ಸ್ನಾನಗೃಹದಲ್ಲಿ ಬಿದ್ದಿದ್ದರು. ಅದರ ಪರಿಣಾಮವಾಗಿ ಅವರ ಬೆನ್ನು ಮೂಳೆಗೆ ಗಂಭೀರವಾದ ಗಾಯವಾಗಿತ್ತು ಎಂದು ಎಎಪಿ ಹೇಳಿದೆ.