Monday, October 2, 2023

ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ

Follow Us

newsics.com

ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಲಿತಮ್ಮ ಎಂಬವರ ಪತಿ ಹರಿಕೃಷ್ಣ ಪ್ರಸಾದ್ (63) ಅವರು ದೀರ್ಘಕಾಲದಿಂದ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಈಚೆಗೆ ಮೃತಪಟ್ಟರು.

ಮನೆಯಲ್ಲಿದ್ದ ರಟ್ಟಿನ ಪೆಟ್ಟಿಗೆಗಳು ಮತ್ತು ಬಟ್ಟೆಗಳನ್ನು ಬಳಸಿ ಲಲಿತಮ್ಮ ಅವರು ತಮ್ಮ ಪತಿಯ ಮೃತದೇಹವನ್ನು ಸೋಮವಾರ ತಾವೇ ದಹಿಸಿದ್ದಾರೆ. ಜತೆಗೆ, ಅಂತಿಮ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಲೂ ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಒಬ್ಬ ಮಗ ಮೆಡಿಕವರ್ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮತ್ತೊಬ್ಬ ಮಗ ಕೆನಡಾದಲ್ಲಿ ನೆಲೆಸಿದ್ದಾರೆ.ಆಸ್ತಿ ಕಲಹದ ಕಾರಣ ಮಕ್ಕಳಿಬ್ಬರೂ ತಂದೆ, ತಾಯಿಯನ್ನು ದೂರವಿಟ್ಟಿದ್ದರು. ಲಲಿತಮ್ಮ ಅವರು ಸಮಾಜದಿಂದಲೂ ದೂರವಿದ್ದರು ಹಾಗಾಗಿ ಅವರ ಸಹಾಯಕ್ಕೆ ಯಾರೂ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಎಲ್ಲಾ ಕೋನಗಳಲ್ಲೂ ತನಿಖೆ ನಡೆಸಿದ ಬಳಿಕ ಯಾವುದೇ ದುಷ್ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿಲ್ಲ ಎಂದರು.

ಸೋಶಿಯಲ್‌ ಮೀಡಿಯಾ ಕ್ರೋಮಿಂಗ್‌ ಟ್ರೆಂಡ್‌; 13 ವರ್ಷದ ಬಾಲಕಿ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!