ವಾಷಿಂಗ್ಟನ್- ಶಿರ್ವ ಮೂಲದ ಪ್ರಸಕ್ತ ಮೈಸೂರಿನ ಕುವೆಂಪು ನಗರದಲ್ಲಿ ವಾಸಿಸುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ವಿದ್ಯಾರ್ಥಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಒಂದುವರೆ ವರ್ಷದ ಹಿಂದೆ ಎಂಜಿನಿಯೆರಿಂಗ್ ಉನ್ನತ ಶಿಕ್ಷಣಕ್ಕೆ ಅಭಿಷೇಕ್ ಅಮೆರಿಕಕ್ಕೆ ತೆರಳಿದ್ದರು. ಕ್ಯಾಲಿಫೋರ್ನಿಯಾದ ಸ್ಯಾನ್ ಬರ್ನಾಡ್ ಡಿನೋ ಕಾಲೇಜಿನಲ್ಲಿ ಎಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದರು. ವಾರಾಂತ್ಯದಲ್ಲಿ ಅಭಿಷೇಕ್ ಹೊಟೇಲೊಂದರಲ್ಲಿ ಪಾರ್ಟ್ ಟೈಮ್ ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಗ್ರಾಹಕನೊಬ್ಬ ಅಭಿಷೇಕ್ ಜೊತೆ ವಾಗ್ವಾದಕ್ಕಿಳಿದು ಬಳಿಕ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ಅಭಿಷೇಕ್ ತಂದೆ ಮೈಸೂರಿನಲ್ಲಿ ಯೋಗ ಶಿಕ್ಷಕರಾಗಿದ್ದಾರೆ.