Wednesday, May 31, 2023

ಗಣಿಯಲ್ಲಿ ಗ್ಯಾಸ್ ಸ್ಫೋಟ; 14 ಕಾರ್ಮಿಕರು ಸಾವು

Follow Us

ಬೀಜಿಂಗ್: ಇಲ್ಲಿನ ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್ ಸ್ಫೋಟಗೊಂಡು 14 ಗಣಿ ಕೆಲಸಗಾರರು ಸಾವನ್ನಪ್ಪಿದ್ದಾರೆ.

ಚೀನಾದ ನೈಋತ್ಯ ಭಾಗದ ಅನ್ಲಾಂಗ್ ಪ್ರದೇಶದಲ್ಲಿರುವ ಗುವಾಂಗ್ಲಾಂಗ್ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ ತಡರಾತ್ರಿ 1.30ರ ಸಮಯದಲ್ಲಿ ಈ ದುರಂತ ನಡೆದಿದೆ. ಇನ್ನೂ ಇಬ್ಬರು ಗಣಿಯಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ದುರ್ಘಟನೆ ವೇಳೆ ಸುಮಾರು 23 ಕಾರ್ಮಿಕರು ನೆಲದಾಳದಲ್ಲಿ ಕೆಲಸ ಮಾಡುತ್ತಿದ್ದರು. ಗ್ಯಾಸ್ ಸ್ಫೋಟಿಸಿದ ಪರಿಣಾಮ 14 ಮಂದಿ ಅಲ್ಲಿಯೇ ಮೃತಪಟ್ಟಿದ್ದಾರೆ. ಏಳು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ‌ಮಾಡಿವೆ.

ಕಲ್ಲಿದ್ದಲು ಉತ್ಪಾದನೆಯಲ್ಲಿ ಜಗತ್ತಿನಲ್ಲಿ ಚೀನಾ ಎರಡನೇ ಸ್ಥಾನದಲ್ಲಿದ್ದು, ಇಲ್ಲಿನ ಗಣಿಪ್ರದೇಶಗಳಲ್ಲಿ ಸ್ಫೋಟ, ಕಾರ್ಮಿಕರ ಸಾವು ನೋವು ಸಾಮಾನ್ಯ. ತಿಂಗಳ ಹಿಂದಷ್ಟೇ ಉತ್ತರ ಚೀನಾದ ಶಾಂಕ್ಷಿ ವಲಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್ ಸ್ಫೋಟ ಆಗಿ 15 ಮಂದಿ ಸಾವನ್ನಪ್ಪಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್

newsics.com ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್‍ ನಾರಾಯಣ್‍ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್...

ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್‌ ಆದೇಶ

newsics.com ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು...

ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ

newsics.com ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಲಿತಮ್ಮ ಎಂಬವರ ಪತಿ...
- Advertisement -
error: Content is protected !!