Monday, October 2, 2023

ಕರಾಚಿಯಲ್ಲಿ ಗ್ರೆನೇಡ್ ದಾಳಿ: ನಾಲ್ವರು ಮಕ್ಕಳು ಸೇರಿ 10 ಮಂದಿ ಸಾವು

Follow Us

newsics.com

ಕರಾಚಿ(ಪಾಕಿಸ್ತಾನ): ಬಲ್ಡಿಯಾ ನಗರದಲ್ಲಿ ಟ್ರಕ್ ಮೇಲೆ ಮೋಟಾರ್ ಸೈಕಲ್ ನಲ್ಲಿ ಬಂದ ದುಷ್ಕರ್ಮಿಗಳು ನಡೆಸಿದ ಗ್ರೆನೇಡ್ ದಾಳಿಯಲ್ಲಿ ನಾಲ್ವರು ಮಕ್ಕಳು ಸೇರಿ ಸುಮಾರು 10 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ದಾಳಿ ವೇಳೆ ಹಲವರು ಗಾಯಗೊಂಡಿದ್ದು, ಸಾವಿನ‌ ಸಂಖ್ಯೆ ಹೆಚ್ವುವ ಸಾಧ್ಯತೆಯಿದೆ.

ಕರಾಚಿಯ ಬಲ್ಡಿಯಾ ನಗರದ ಮಾವಾಚ್ ಗೋತ್ ಪ್ರದೇಶದ ಬಳಿ ಟ್ರಕ್ ಮೇಲೆ ಗ್ರೆನೇಡ್ ದಾಳಿ ನಡೆಸಲಾಗಿದ್ದು, ಪ್ರಾಥಮಿಕ ತನಿಖೆಯ ಮೂಲಕ ಇದೊಂದು ಗ್ರೆನೇಡ್ ದಾಳಿ ಎಂದು ಗೊತ್ತಾಗಿದೆ ಎಂದು ಭಯೋತ್ಪಾದನೆ ನಿಗ್ರಹ ಇಲಾಖೆಯ (ಸಿಟಿಡಿ) ಹಿರಿಯ ಅಧಿಕಾರಿ ರಾಜಾ ಉಮರ್ ಖಟ್ಟಾಬ್ ಸ್ಪಷ್ಟಪಡಿಸಿದ್ದಾರೆ.

ಮೃತದೇಹಗಳನ್ನು ಡಾ.ರುತ್ ಪ್ಫೌ ಸಿವಿಲ್ ಆಸ್ಪತ್ರೆಗೆ ತರಲಾಗಿದೆ. ಗ್ರೆನೇಡ್ ದಾಳಿಯಲ್ಲಿ ಆರು ಮಹಿಳೆಯರು ಮತ್ತು 4 ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಇತರ 10 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಒಂದೂವರೆ ಕೋಟಿ ಭಾರತೀಯರಿಂದ ರಾಷ್ಟ್ರಗೀತೆ

ಸ್ವಾತಂತ್ರ್ಯೋತ್ಸವದ ಶುಭಾಶಯಗಳು

ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯೋಣ: ಸಿಎಂ ಬೊಮ್ಮಾಯಿ

ಹಿರಿಯ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ‌ ಪೂಂಜ ಇನ್ನಿಲ್ಲ

ಹೈಟಿಯಲ್ಲಿ ಪ್ರಬಲ ಭೂಕಂಪ: 29 ಮಂದಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!