Thursday, March 30, 2023

ಕೀನ್ಯಾ ಪ್ರವಾಹ ಸಂತ್ರಸ್ತರಿಗೆ ನೆರವಾದ ಕನ್ನಡಿಗ

Follow Us

ವಿಜಯಪುರ: ಜಿಲ್ಲೆಯ ಬರಟಗಿ ಲಂಬಾಣಿ ತಾಂಡಾದ ಕನ್ನಡಿಗರೊಬ್ಬರು ಪ್ರವಾಹಪೀಡಿತ ವಿದೇಶದಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುವ ಮೂಲಕ ಹೃದಯ ವೈಶಾಲ್ಯ ಮೆರೆದಿದ್ದಾರೆ.
ಕನ್ನಡಿಗ ಕೇತನ್ ನಾಯ್ಕ ಅವರ ಮಾನವೀಯತೆಯಯನ್ನು ಕೀನ್ಯಾ ಮಾಧ್ಯಮಗಳು ಹಾಡಿ ಹೊಗಳಿವೆ. 2017ರಲ್ಲಿ ಆಫ್ರಿಕಾ ಖಂಡದ ಕೀನ್ಯಾಗೆ ತೆರಳಿದ್ದ ಕೇತನ್ ನಾಯ್ಕ್ ಅವರು ರಾಯ್ ಗ್ರೂಪ್ ಆಫ್ ಕಂಪನೀಸ್​ನ ಸಕ್ಕರೆ ಕಾರ್ಖಾನೆಯಲ್ಲಿ ಕೃಷಿ ಮ್ಯಾನೇಜರ್ ಆಗಿದ್ದರು. ಪಶ್ಚಿಮ ಕೀನ್ಯಾದ ನಿವಾನಿ, ಜಮಾನಾ, ಪೊಂಗಲ್‌ಬೀಜಾ ಸೇರಿದಂತೆ ಸುಮಾರು 20ರಿಂದ 30 ಗ್ರಾಮಗಳಲ್ಲಿ ಭೀಕರ ಪ್ರವಾಹ ಉಂಟಾಗಿತ್ತು. ಅಲ್ಲಿನ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿರಲಿಲ್ಲ. ಕೂಡಲೆ ಜಾಗೃತನಾದ ಈತ ತನ್ನ ಕಂಪನಿಯ ಮುಖ್ಯಸ್ಥ ತೇಜವೀರ್‌ಸಿಂಗ್ ಅವರಿಗೆ ಫೋನ್ ಮಾಡಿ ನೆರವಾಗುವ ಬಗ್ಗೆ ಕೇಳಿದರು. ಆಗ ಆತನ ಕಂಪನಿಯ ಮಾಲೀಕ ‘ನಿಮಗೆ ತಿಳಿದಂತೆ ನೆರವಾಗಿ’ ಎಂದರು. ತಮ್ಮ ಕಾರ್ಖಾನೆಯ ಕಾರ್ಮಿಕರ ಜತೆಗೂಡಿ ನೆರೆ ಸಂತ್ರಸ್ತರಿಗೆ ನೆರವಾದ ಕೇತನ್ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಸರಬರಾಜು ಮಾಡಿ, ಅವರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಿದ್ದಾರೆ. ಅಲ್ಲಿ ನಿರಾಶ್ರಿತರ ಶಿಬಿರ ತೆರೆದು ಅವರಿಗೆ ಅಗತ್ಯವಾದ ಮೆಕ್ಕೆಜೋಳ, ಎಣ್ಣೆ, ಸಕ್ಕರೆ, ಸೋಪು, ಬಿಸ್ಕತ್ ಸೇರಿ ಹಲವು ಸಾಮಗ್ರಿಗಳನ್ನು ಒದಗಿಸಿದ್ದಾರೆ. ಹೀಗೆ ಕೀನ್ಯಾದವರ ಹೊಗಳಿಕೆಗೆ ಪಾತ್ರರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!

newsics.com ಬಿಹಾರ: ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

newsics.com ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ...

ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ

newsics.com ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು  ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
- Advertisement -
error: Content is protected !!