Wednesday, September 27, 2023

ಕೀನ್ಯಾ ಪ್ರವಾಹ ಸಂತ್ರಸ್ತರಿಗೆ ನೆರವಾದ ಕನ್ನಡಿಗ

Follow Us

ವಿಜಯಪುರ: ಜಿಲ್ಲೆಯ ಬರಟಗಿ ಲಂಬಾಣಿ ತಾಂಡಾದ ಕನ್ನಡಿಗರೊಬ್ಬರು ಪ್ರವಾಹಪೀಡಿತ ವಿದೇಶದಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುವ ಮೂಲಕ ಹೃದಯ ವೈಶಾಲ್ಯ ಮೆರೆದಿದ್ದಾರೆ.
ಕನ್ನಡಿಗ ಕೇತನ್ ನಾಯ್ಕ ಅವರ ಮಾನವೀಯತೆಯಯನ್ನು ಕೀನ್ಯಾ ಮಾಧ್ಯಮಗಳು ಹಾಡಿ ಹೊಗಳಿವೆ. 2017ರಲ್ಲಿ ಆಫ್ರಿಕಾ ಖಂಡದ ಕೀನ್ಯಾಗೆ ತೆರಳಿದ್ದ ಕೇತನ್ ನಾಯ್ಕ್ ಅವರು ರಾಯ್ ಗ್ರೂಪ್ ಆಫ್ ಕಂಪನೀಸ್​ನ ಸಕ್ಕರೆ ಕಾರ್ಖಾನೆಯಲ್ಲಿ ಕೃಷಿ ಮ್ಯಾನೇಜರ್ ಆಗಿದ್ದರು. ಪಶ್ಚಿಮ ಕೀನ್ಯಾದ ನಿವಾನಿ, ಜಮಾನಾ, ಪೊಂಗಲ್‌ಬೀಜಾ ಸೇರಿದಂತೆ ಸುಮಾರು 20ರಿಂದ 30 ಗ್ರಾಮಗಳಲ್ಲಿ ಭೀಕರ ಪ್ರವಾಹ ಉಂಟಾಗಿತ್ತು. ಅಲ್ಲಿನ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿರಲಿಲ್ಲ. ಕೂಡಲೆ ಜಾಗೃತನಾದ ಈತ ತನ್ನ ಕಂಪನಿಯ ಮುಖ್ಯಸ್ಥ ತೇಜವೀರ್‌ಸಿಂಗ್ ಅವರಿಗೆ ಫೋನ್ ಮಾಡಿ ನೆರವಾಗುವ ಬಗ್ಗೆ ಕೇಳಿದರು. ಆಗ ಆತನ ಕಂಪನಿಯ ಮಾಲೀಕ ‘ನಿಮಗೆ ತಿಳಿದಂತೆ ನೆರವಾಗಿ’ ಎಂದರು. ತಮ್ಮ ಕಾರ್ಖಾನೆಯ ಕಾರ್ಮಿಕರ ಜತೆಗೂಡಿ ನೆರೆ ಸಂತ್ರಸ್ತರಿಗೆ ನೆರವಾದ ಕೇತನ್ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಸರಬರಾಜು ಮಾಡಿ, ಅವರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಿದ್ದಾರೆ. ಅಲ್ಲಿ ನಿರಾಶ್ರಿತರ ಶಿಬಿರ ತೆರೆದು ಅವರಿಗೆ ಅಗತ್ಯವಾದ ಮೆಕ್ಕೆಜೋಳ, ಎಣ್ಣೆ, ಸಕ್ಕರೆ, ಸೋಪು, ಬಿಸ್ಕತ್ ಸೇರಿ ಹಲವು ಸಾಮಗ್ರಿಗಳನ್ನು ಒದಗಿಸಿದ್ದಾರೆ. ಹೀಗೆ ಕೀನ್ಯಾದವರ ಹೊಗಳಿಕೆಗೆ ಪಾತ್ರರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!