Thursday, December 7, 2023

ನವಾಜ್‌ ಷರೀಫ್‌ ಬಂಧನಕ್ಕೆ ಪಾಕ್ ಸರ್ಕಾರ ವಾರಂಟ್

Follow Us

newsics.com
ಇಸ್ಲಾಮಾಬಾದ್‌: ಅಕ್ರಮ ಭೂ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದಚ್ಯುತ ಪ್ರಧಾನಿ ನವಾಜ್‌ ಷರೀಫ್‌ (70) ಬಂಧನಕ್ಕೆ ಪಾಕಿಸ್ತಾನ ಸರ್ಕಾರ ವಾರಂಟ್‌ ಹೊರಡಿಸಿದೆ.
‘ಷರೀಫ್‌ ಬಂಧನಕ್ಕೆ ಪಾಕಿಸ್ತಾನ ಸರ್ಕಾರವು ಹೊರಡಿಸಿರುವ ವಾರಂಟ್,‌ ಲಂಡನ್‌ನಲ್ಲಿರುವ ಪಾಕಿಸ್ತಾನ ಹೈ ಕಮಿಷನ್‌ಗೆ ಗುರುವಾರವೇ ತಲುಪಿದೆ. ಈ ಬೆಳವಣಿಗೆಯ ಕುರಿತು ಹೈ ಕಮಿಷನ್‌ ಯಾವುದೇ ಅಧಿಕೃತ ಹೇಳಿಕೆಯನ್ನೂ ನೀಡಿಲ್ಲ’ ಎಂದು ದಿ ಡಾನ್‌ ದಿನಪತ್ರಿಕೆ ವರದಿ ಮಾಡಿದೆ.
ಷರೀಫ್ ಸದ್ಯ ಲಂಡನ್‌ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಷರೀಫ್‌ ಮಾಡಿಕೊಂಡಿದ್ದ ಮನವಿಯನ್ನು ಲಾಹೋರ್‌ ಹೈಕೋರ್ಟ್‌ ಪುರಸ್ಕರಿಸಿತ್ತು. ನಾಲ್ಕು ವಾರಗಳ ಕಾಲ ವಿದೇಶದಲ್ಲಿರಲು ಅನುಮತಿ ಲಭಿಸಿದ್ದರಿಂದ ಕಳೆದ ವರ್ಷದ ನವೆಂಬರ್‌ನಲ್ಲಿ ಷರೀಫ್‌, ಲಂಡನ್‌ಗೆ ಪ್ರಯಾಣ ಬೆಳೆಸಿದ್ದರು. ನವಾಜ್‌, ಅವರ ಪುತ್ರಿ ಮರಿಯಂ ಹಾಗೂ ಅಳಿಯ ಮಹಮ್ಮದ್‌ ಸಫ್ದಾರ್‌ ಅವರು ಅಕ್ರಮ ಭೂ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.
ಡಿಸೆಂಬರ್‌ 2018 ರಲ್ಲಿ ಅಲ್‌ ಅಜಿಜಿಯಾ ಸ್ಟೀಲ್‌ ಮಿಲ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಷರೀಫ್‌ಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಎರಡೂ ಪ್ರಕರಣಗಳಲ್ಲಿಯೂ ಅವರಿಗೆ ಜಾಮೀನು ಲಭಿಸಿತ್ತು. ‘ತವರಿಗೆ ಮರಳಲು ಷರೀಫ್‌ಗೆ ಎಂಟು ವಾರಗಳ ಗಡುವು ನೀಡಲಾಗಿತ್ತು. ಆರೋಗ್ಯ ಹದಗೆಟ್ಟಿರುವುದರಿಂದ ಅವರು ಇನ್ನೂ ಹಿಂತಿರುಗಿಲ್ಲ’ ಎಂದು ಷರೀಫ್‌ ಪರ ವಕೀಲರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...

ಹೊತ್ತಿ ಉರಿದ ಕಾರು – ಟಿಪ್ಪರ್ : ಇಬ್ಬರು ಸಜೀವ ದಹನ

Newsics.com ಬೆಳಗಾವಿ : ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬಾಲಕಿ ಸೇರಿ ಇಬ್ಬರು ಸಜೀವ ದಹನವಾದರೆ ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...
- Advertisement -
error: Content is protected !!