Sunday, October 1, 2023

20 ಸಚಿವರ ನೇಮಕ ಅಸಿಂಧು ಎಂದ ಸುಪ್ರೀಂ ಕೋರ್ಟ್; ನೇಪಾಳ‌ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಜಟಿಲ

Follow Us

newsics.com

ಕಠ್ಮಂಡು: ನೇಪಾಳದಲ್ಲಿ 20 ಸಚಿವರ ನೇಮಕ ಅಸಿಂಧು ಎಂದ ಸುಪ್ರೀಂ ಕೋರ್ಟ್; ನೇಪಾಳ‌ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಜಟಿಲ ಉಂಟಾಹಿರುವ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ.

ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು 20 ಸಚಿವರನ್ನು ನೇಮಕ ಮಾಡಿರುವುದು ಅಸಾಂವಿಧಾನಿಕ ಎಂದು ನೇಪಾಳ ಸುಪ್ರೀಂಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶಂಷೇರ್‌ ರಾಣಾ ಹಾಗೂ ನ್ಯಾಯಮೂರ್ತಿ ಪ್ರಕಾಶಕುಮಾರ್‌ ಧುಂಗಾನಾ ಅವರಿರುವ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಇದರೊಂದಿಗೆ ಸಂಸತ್‌ ವಿಸರ್ಜನೆಗೊಳಿಸಿದ ನಂತರ ಪ್ರಧಾನಿ ಒಲಿ ಅವರು ಎರಡು ಬಾರಿ ಮಾಡಿದ್ದ ಸಂಪುಟ ವಿಸ್ತರಣೆ ಅಸಿಂಧುಗೊಂಡಂತಾಗಿದೆ.

ಸುಪ್ರೀಂ‌ ಕೋರ್ಟ್ ತೀರ್ಪಿನಿಂದಾಗಿ ಪ್ರಧಾನಿ ಒಲಿ ಸೇರಿದಂತೆ ಐವರು ಸಚಿವರು ಮಾತ್ರ ಸಂಪುಟದಲ್ಲಿ ಉಳಿದುಕೊಂಡಿದ್ದಾರೆ. ಇಬ್ಬರು ಉಪ ಪ್ರಧಾನಿಗಳಾದ ರಾಜೇಂದ್ರ ಮಹತೊ (ಜನತಾ ಸಮಾಜವಾದಿ ಪಾರ್ಟಿ) ಹಾಗೂ ರಘುವೀರ್‌ ಮಹಾಸೇಠ್‌ (ಪ್ರಧಾನಿ ಒಲಿ ನೇತೃತ್ವದ ಸಿಪಿಎನ್‌–ಯುಎಂಎಲ್ ಪಾರ್ಟಿ) ಅಧಿಕಾರ ಕಳೆದುಕೊಂಡಿದ್ದಾರೆ.

ರಾಜ್ಯದಲ್ಲಿ ಮೊದಲ ಡೆಲ್ಟಾ ಪ್ಲಸ್ ವೈರಸ್ ಪತ್ತೆ

ಸೆಪ್ಟೆಂಬರ್’ನಲ್ಲಿ 2 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ: ಏಮ್ಸ್ ಮುಖ್ಯಸ್ಥ ವಿಶ್ವಾಸ

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!